ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:
ರಿಪ್ಪನ್ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…