Headlines

ಜುಲೈ 30 ರ ಹುಬ್ಬಳ್ಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಧುಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ: ಅರ್ ಎಂ ಮಂಜುನಾಥ ಗೌಡ

ಸಾಗರ: ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ ಗೌಡರವರು ಹೇಳಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜುಲೈ 30ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ರವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ…

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More

ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಗೆ ಶುಭಾಶಯ ಕೋರಿದ ಕುಮಾರ್ ಬಂಗಾರಪ್ಪ:

  ಸೊರಬ: ಶಾಸಕರಾದ ಕುಮಾರ್ ಬಂಗಾರಪ್ಪನವರು ನೂತನ ನಿಯೋಜಿತ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ರವರಿಗೆ ಸೊರಬ ವಿಧಾನಸಭಾ ಜನತೆಯ ಪರವಾಗಿ ಶುಭಾಶಯ ಕೋರಿದರು. ಕರ್ನಾಟಕದ  ಜನರ ಸೇವೆ ಮಾಡುವ ಅವಕಾಶ ಅವರಿಗೆ ಸಿಕ್ಕಿದೆ,ಸಮರ್ಥವಾಗಿ ನಿಭಾಯಿಸುವ ಶಕ್ತಿ ಅವರಲ್ಲಿದೆ,ಜನಪರ ಹಾಗೂ ಅಭಿವೃದ್ಧಿ ಪರ ಸರ್ಕಾರ ನೀಡುತ್ತಾರೆ ಅನ್ನೋ ಭರವಸೆ ಇದೆ ಒಳ್ಳೆಯದಾಗಲಿ ಎಂದು ಹಾರೈಸುವೆ ಎಂದರು. ವರದಿ: ವೆಂಕಟೇಶ್ ಚಂದ್ರಗುತ್ತಿ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್…

Read More

ಕರ್ನಾಟಕದ ನೂತನ ಉಪ ಮುಖ್ಯಮಂತ್ರಿಗಳಾಗಿ ಆರ್ ಅಶೋಕ್,ಗೋವಿಂದ ಕಾರಜೋಳ, ಶ್ರೀರಾಮುಲು ಆಯ್ಕೆ:

ಬೆಂಗಳೂರು: ಮುಖ್ಯಮಂತ್ರಿ ಘೋಷಣೆ ಬಳಿಕ ಮೂವರು ಉಪಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗಿದೆ. ಈ ಮೊದಲು ಕಂದಾಯ ಸಚಿವರಾಗಿದ್ದ ಹಾಗೂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಬಿ. ಶ್ರೀರಾಮುಲು ಉಪಮುಖ್ಯಮಂತ್ರಿಗಳಾಗಿ ನೇಮಕಗೊಂಡಿದ್ದಾರೆ. ಒಕ್ಕಲಿಗ, ದಲಿತ ಮತ್ತು ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಹೆಸರು ಘೋಷಣೆ ಬಳಿಕ ಬಸವರಾಜ ಬೊಮ್ಮಾಯಿ…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:

  ಬೆಂಗಳೂರು: ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಧಾನ ಸೌಧದಲ್ಲಿಂದೂ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದಾಯ ಭಾಷಣ ಮಾಡಿದ ಅವರು ತಮ್ಮ ರಾಜಕೀಯ ಏಳು – ಬೀಳುಗಳನ್ನು ಹೇಳುವಾಗ ಭಾವುಕರಾದರು. ದುಃಖತಪ್ತರಾಗಿ ಮಾತನಾಡಿದ ಅವರು “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ ಅವರಿಗೆ ನಾನು ಋಣಿಯಾಗಿದ್ದೇನೆ….

Read More

ರಿಪ್ಪನ್ ಪೇಟೆ: ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ಪ್ರತಿಭಟನೆ

ರಿಪ್ಪನ್ ಪೇಟೆ: ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಬೆಳಗ್ಗೆ 10:00 ಗಂಟೆ ಗೆ ಸರಿಯಾಗಿ ಬಿಜೆಪಿ ಪಕ್ಷದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಪ್ಪನ್ ಪೇಟೆ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಪಂ ಸದಸ್ಯರಾದ ಆಸೀಪ್ ಬಾಷಾಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರಿಗೆ ಹಂಚುವ ಮೊಟ್ಟೆಯಲ್ಲಿ ಭಾರಿ ಹಗರಣ ನಡೆಸಿರುವ ಶಶಿಕಲಾ ಜೊಲ್ಲೆ ತಮ್ಮ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರ ವಿರುದ್ಧ…

Read More

ಕರಾವಳಿಯನ್ನೇ ಬೆಚ್ಚಿ ಬೀಳಿಸಿದ ವಿಶಾಲ ಗಾಣಿಗ ಕೊಲೆಯ ಪಿನ್​ ಟು ಪಿನ್​ ಡೀಟೈಲ್ಸ್​:

ಉಡುಪಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಮೂಲದ ವಿಶಾಲ ಗಾಣಿಗ ಅವರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ ಪತಿಯೇ ಪತ್ನಿಯ ಕೊಲೆ ಸಂಚು ರೂಪಿಸಿದ ವಿಚಾರ ಬೆಳಕಿಗೆ ಬಂದಿದ್ದು, ಕೊಲೆಯ ಹಿಂದಿನ ಪಿನ್​ ಟು ಪಿನ್​ ಡೀಟೈಲ್ಸ್​ ಇಲ್ಲಿದೆ. ವಿಶಾಲ ಗಾಣಿಗ ತನ್ನ ಆರು ವರ್ಷದ ಮಗಳ ಜೊತೆಗೆ ಜೂನ್ ತಿಂಗಳಾಂತ್ಯದಲ್ಲಿ ದುಬೈನಿಂದ ತವರಿಗೆ ಬಂದಿದ್ದರು. ಪತಿ ರಾಮಕೃಷ್ಣ ದುಬೈನಲ್ಲಿ ಕಂಪೆನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ವಿಶಾಲ ಗಾಣಿಗ ಅವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯನ್ನು…

Read More

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ  ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ    ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ    ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…

Read More