Headlines

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಪಾಳುಬಿದ್ದಿವೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಪೋಲೀಸ್ ವಸತಿಗೃಹಗಳು:

ಆನಂದಪುರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ಇಂದು ಸಂಪೂರ್ಣವಾಗಿ ಶಿಥಿಲಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಾಣುವಂತಹ ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಾಗದಲ್ಲಿ ನಿರ್ಮಿಸಿರುವಂತಹ 5 ಪೊಲೀಸ್ ವಸತಿ ಗೃಹಗಳು ಇದೀಗ ಸಂಪೂರ್ಣವಾಗಿ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಯ ಮುಖ್ಯ ತಾಣವಾಗಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೆ. ಮದ್ಯವ್ಯಸನಿ ಗಳಿಗಂತೂ ಇದು ಅಡ್ಡವಾಗಿದ್ದು ಯಾವುದೇ ಭಯವಿಲ್ಲದೆ ವಸತಿಗೃಹದ…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

SSLC ವಿಧ್ಯಾರ್ಥಿಗಳಿಗೆ ಪರೀಕ್ಷೆಯ ದಿನ ಉಚಿತ ಬಸ್ ವ್ಯವಸ್ಥೆ: ಕೆ ಎಸ್ ಆರ್ ಟಿ ಸಿ & ಬಿಎಂಟಿಸಿ ಯಿಂದ ಅದೇಶ

ಬೆಂಗಳೂರು: ಇದೇ ತಿಂಗಳ 19 ಹಾಗೂ 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಇದೇ ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬಿಎಂಟಿಸಿ ಅನುಮತಿ ನೀಡಿದ್ದು ಈ ಬಗ್ಗೆ ಎರಡು ನಿಗಮಗಳು ಆದೇಶ ಹೊರಡಿಸಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಕ್ಕಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು…

Read More

ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ:

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜುಲೈ 15ರಿಂದ ಎರಡು ದಿನಗಳ ಶಿವಮೊಗ್ಗ ಮತ್ತು ದಾವಣಗೆರೆ ಪ್ರವಾಸ ಕೈಗೊಳ್ಳಲಿದ್ದಾರೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮಾಹಿತಿ ನೀಡಿದರು. ಜುಲೈ 15ರ ಬೆಳಗ್ಗೆ 11 ಗಂಟೆಗೆ ಅವರು  ನೇರವಾಗಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪಕ್ಕೆ ಆಗಮಿಸಿ ಅಲ್ಲಿ ಲಂಬಾಣಿ ಜನರೊಂದಿಗೆ ಕುಂದುಕೊರತೆ ಕುರಿತು ಸಂವಾದ ನಡೆಸುವರು. ನಂತರ 3 ಗಂಟೆಗೆ ಶಿಕಾರಿಪುರಕ್ಕೆ ತೆರಳಿ ಅಲ್ಲೂ ಕೂಡಾ ಲಂಬಾಣಿ ಜನರ ಸಮಸ್ಯೆ ಆಲಿಸುವರು ಅದೇ ರೀತಿ…

Read More

ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ದ ತೀವ್ರ ಪ್ರತಿಭಟನೆ:ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಇದಕ್ಕೆ ಲಗಾಮ ಹಾಕುವವರೇ ಇಲ್ಲವಾಗಿದೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಪಕ್ಷದ ಸಾಮಾನ್ಯ ಕಾರ್ಯಕರ್ತನವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಯಾವುದೇ ಹೊಸ ಯೋಜನೆಗಳು ಬಂದರೂ ಕೂಡಾ ಕಿಕ್‍ಬ್ಯಾಕ್ ಸಿದ್ಧವಾಗಿಯೇ ಇರುತ್ತದೆ. ಶೇ.20ರಷ್ಟು ಗುಣಮಟ್ಟದ ಕೆಲಸವನ್ನು ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬೇಕಾಬಿಟ್ಟಿ ಕೆಲಸಗಳು ನಡೆಯುತ್ತಿದೆ. ಕಳಪೆ ರಸ್ತೆಯಿಂದ ಹಿಡಿದು…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More