ರಿಪ್ಪನ್ ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ
ರಿಪ್ಪನ್ ಪೇಟೆ. ಜು.21: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸರಕಾರದ ಹೊಸ ಮಾರ್ಗಸೂಚಿಯಂತೆ ರಿಪ್ಪನ್ ಪೇಟೆ ಹಾಗೂ ಕೆಂಚನಾಲ,ಗರ್ತಿಕೆರೆ,ಎಣ್ಣೆನೊಡ್ಲು,ಗಾಳಿಬೈಲು ಮಸೀದಿಗಳಲ್ಲಿ ಬಕ್ರೀದ್ ಹಬ್ಬ ಆಚರಿಸಲಾಯಿತು. ಆಯಾ ಮಸೀದಿಗಳಲ್ಲಿ ಸೇರುವ ಜನರ ಸಾಮಥ್ರ್ಯಕ್ಕೆ ಅನುಗುಣವಾಗಿ ಶೇ.50ನ್ನು ಮೀರದಂತೆ ಹಂತ ಹಂತವಾಗಿ ಸಾಮೂಹಿಕ ನಮಾಜ್ ನೆರವೇರಿತು. ಮುಸ್ಲಿಂ ಭಾಂಧವರು ಜಗತ್ತಿನಲ್ಲಿ ವ್ಯಾಪಿಸಿರುವ ಕೊರೊನಾ ಮಹಮಾರಿ ಶೀಘ್ರ ರೋಗಮುಕ್ತವಾಗಬೇಕು,ಜಗತ್ತಿನಲ್ಲೆಡೆ ಶಾಂತಿ ಪಸರಿಸಬೇಕು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಬೇಕು ಎಂದು ವಿಶೇಷ ಪ್ರಾರ್ಥನೆ…