Headlines

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…

Read More

ಕರಾಟೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಮಲೆನಾಡಿನ ಕುವರಿ ಮೋನಿಕಾ ಎನ್ ಶೆಟ್ಟಿ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅವಕಾಶವಿದ್ದರೆ ಸಾಧನೆಯ ಮೂಲಕ ತಮ್ಮ ಸಾಮರ್ಥ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ತೋರಿಸಬಲ್ಲರು ಎಂಬುದಕ್ಕೆ ಮೋನಿಕಾ ಎನ್ ಶೆಟ್ಟಿ   ಸಾಕ್ಷಿಯಾಗಿದ್ದಾರೆ.  ಭಾರತ ಕ್ರಿಕೆಟ್ ಜನಪ್ರಿಯತೆಯ ರಾಷ್ಟ್ರ ಎಂಬುದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ. ಆದರೆ, ಇತರ ಕ್ರೀಡಾಪಟುಗಳು ಕೂಡಾ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಗೆ ತರಲು ಪ್ರಯತ್ನಿಸುತ್ತಿದ್ದಾರೆ.  ಭಾರತಂತಹ ದೇಶದಲ್ಲಿ ಕಡಿಮೆ ಜನಪ್ರಿಯತೆ ಹೊಂದಿರುವ ಕ್ರೀಡೆಗಳಲ್ಲಿ ಒಂದಾದ ಕರಾಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದ ಮೋನಿಕಾ ಎನ್ ಶೆಟ್ಟಿ ಕೂಡಾ…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read More

ರಿಪ್ಪನ್ ಪೇಟೆ ಸಮೀಪದ ಹರತಾಳು ಕ್ರಾಸ್ ನಲ್ಲಿ ಪಿಕಪ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ:

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮದ ಹರತಾಳು  ಕ್ರಾಸ್ ಬಳಿ ಇಕೋ ಕಾರು ಮತ್ತು ಮಹೀಂದ್ರ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ರಿಪ್ಪನ್ ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತ್ತಿದ್ದ ಮಹೀಂದ್ರ ಪಿಕಪ್ (KA-15 A 2541) ವಾಹನ ಹಾಗೂ ಜೋಗ ಪ್ರವಾಸಕ್ಕೆಂದು ಬಂದು ವಾಪಸ್ ಬೆಳ್ತಂಗಡಿ ಗ್ರಾಮಕ್ಕೆ ತೆರಳುತ್ತಿದ್ದ ಇಕೋ ಕಾರು (KA-19 AB 8866) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಳೂರು ಗ್ರಾಮದ ಹರತಾಳು ಕ್ರಾಸ್ ನಲ್ಲಿ ನಡೆದಿದೆ. ಅದೃಷ್ಟವಶಾತ್…

Read More

ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :

ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಗೋ ಸಾಕಾಣಿಕೆ : ಇಬ್ಬರಬಂಧನ

  ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗೋವಿನ‌ ಮಾರಾಟ ಮತ್ತು ಸಾಗಾಣಿಕ ವಿರುದ್ಧ ದಾಳಿ ನಡೆಸಲಾಗಿದ್ದು ಒಂದು ಕಡೆ ಗೋವುಗಳನ್ನ ರಕ್ಷಿಸಲಾದರೆ ಇನ್ನೊಂದೆಡೆ ಮನೆಯಲ್ಲಿಯೇ ಗೋವನ್ನ ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ. ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನ ಟಾಟಾ‌ಏಸ್ ವಾಹನದಲ್ಲಿ ತುಂಬಿಸಿಕೊಂಡು ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಆಟೋದಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ. ಕಣಸೆ ಗ್ರಾಮದ ಗಣಪತಿ ಮತ್ತು ಆತನ ಪುತ್ರ ದೇವರಾಜ್ ನನ್ನ ಬಂಧಿಸಲಾಗಿದೆ. ಅದರಂತೆ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More