Headlines

ಜನ ಸಾಮಾನ್ಯರ ಪ್ರಶಂಸೆಗೆ ಪಾತ್ರರಾದ ರಿಪ್ಪನ್ ಪೇಟೆಯ ಗ್ರಾಮ ಪಂಚಾಯತಿಯ ಯುವ ಸದಸ್ಯ::

ರಿಪ್ಪನ್ ಪೇಟೆ:: ರಾಜ್ಯಾದ್ಯಂತ ಕೋವಿಡ್ ಹಿನ್ನಲೆ ಲಾಕ್ ಡೌನ್ ಹೇರಿಕೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವಾಗ ರಿಪ್ಪನ್ ಪೇಟೆಯ ಬರುವೆ 3 ನೇ ವಾರ್ಡಿನ ಗ್ರಾಮ ಪಂಚಾಯಿತಿಯ ಯುವ ಸದಸ್ಯರಾದ ನಿರೂಪ್ ಕುಮಾರ್ ರವರು ಜನರ ಕಷ್ಟಕ್ಕೆ ಬೆನ್ನಿಗೆ ನಿಂತು ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರಿಗೆ ಮಾದರಿಯಾಗಿದ್ದಾರೆ.. ವೈಯಕ್ತಿಕವಾಗಿ ಹಾಗೂ ಸ್ನೇಹಿತರ ಸಹಕಾರದೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಮುಖಾಂತರ ತನ್ನ ವಾರ್ಡಿನ ಸುಮಾರು 300 ಕುಟುಂಬಕ್ಕೆ ದಿನಸಿ ಕಿಟ್ ಕೊಟ್ಟು ಅವರ ಕಷ್ಟಕ್ಕೆ ಬೆಂಬಲವಾಗಿ ನಿಂತು ಆ ಕುಟುಂಬಗಳಲ್ಲಿ…

Read More

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್ (73)‌ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ…

Read More

ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್! ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ….

Read More

ಕಾಂಗ್ರೆಸ್ ವಿರುದ್ದ ಅಪಪ್ರಚಾರ ಲೇಖನ; ಚಕ್ರವರ್ತಿ ಸೂಲಿಬೆಲೆ ವಿರುದ್ದ ದೂರು ದಾಖಲು::

ಬೆಂಗಳೂರು::: ಕಾಂಗ್ರೆಸ್‌ ವಿರುದ್ದ ಅಪಪ್ರಚಾರ ಲೇಖನವನ್ನು ಬರೆದು, ಕಾಂಗ್ರೆಸ್‌ ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ. ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು….

Read More

ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಸದಸ್ಯರ ಮೇಲೆ ಭೂ ಕಬಳಿಕೆ ಆರೋಪ ಮಾಡಿದ್ದ ಪತ್ರಕರ್ತನ ವಿರುದ್ಧ ಕೇಸ್​!

ಮೂರು ದಿನಗಳ ಹಿಂದೆ ಪತ್ರಕರ್ತ ವಿನೀತ್​ ನರೈನ್​ ಬಹಿರಂಗವಾಗಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, ಚಂಪತ್ ರಾಯ್ ಮತ್ತು ಅವರ ಸಹೋದರರು  ಬಿಜ್ನೋರ್‌ನಲ್ಲಿ ಭೂ ಕಬಳಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು. ಉತ್ತರಪ್ರದೇಶ (ಜೂನ್ 21); ಶತಮಾನಗಳಿಂದ ಇತ್ಯರ್ಥವಾದಗ ರಾಮ ಜನ್ಮಭೂಮಿ ವಿವಾದಕ್ಕೆ ಸುಪ್ರೀಂ ಕೋರ್ಟ್​ ಪೂರ್ಣ ವಿರಾಮ ಇಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಕಳೆದ ವರ್ಷ ಭೂಮಿ ಪೂಜೆ ನೆರವೇರಿಸಿ ದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಅನ್ನು ನಿರ್ಮಿಸಿ, ದೇಶದಾದ್ಯಂತ…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

ಭದ್ರಾ ಮೇಲ್ದಂಡೆ ಹಗರಣ ತನಿಖೆಗೆ ಆಗ್ರಹ

ರಿಪ್ಪನ್ ಪೇಟೆ:: ಭಾರತೀಯ ಜನತಾಪಕ್ಷದ ವಿಧಾನ ಪರಿಷತ್ ಸದಸ್ಯರಾದ ಹೆಚ್ ವಿಶ್ವನಾಥ್ ರವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 20000 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.ಬೆಂಕಿಯಿಲ್ಲದೇ ಹೊಗೆಯಾಡಲು ಸಾಧ್ಯವಿಲ್ಲ ಈ ದಿಸೆಯಲ್ಲಿ ಮಾನ್ಯ ರಾಜ್ಯಪಾಲರು ಕೂಡಲೇ ಸರಕಾರದಿಂದ ವರದಿ ತರಿಸಿ ಮಾನ್ಯ ಪ್ರಧಾನ ಮಂತ್ರಿಗಳಿಗೆ ತನಿಖೆ ನಡೆಸಲು ಸೂಕ್ತ ಶಿಪಾರಸ್ಸು ಮಾಡಬೇಕು ಎಂದೂ ರಾಜ್ಯ ಜೆಡಿಎಸ್ ಮುಖಂಡ ಆರ್ ಎ ಚಾಬುಸಾಬ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಸ್ವತಃ ಆಡಳಿತ ಪಕ್ಷದ ಶಾಸಕರಿಂದಲೇ ಫೋನ್ ಕದ್ದಾಲಿಕೆಯ ಆರೋಪ ಕೇಳಿ…

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More