ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ – ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ | ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಸಿ.ಟಿ. ರವಿ ವಿವಾದಿತ ಹೇಳಿಕೆಗೆ ಸವಿತಾ ಸಮಾಜದ ಆಕ್ರೋಶ ಕ್ಷಮೆಯಾಚಿಸದಿದ್ದರೆ ರಾಜ್ಯವ್ಯಾಪಿ ಉಗ್ರ ಪ್ರತಿಭಟನೆ ಎಚ್ಚರಿಕೆ ರಿಪ್ಪನ್ಪೇಟೆ : ಮಾಜಿ ಸಚಿವ ಸಿ.ಟಿ. ರವಿ ರವರು ಸವಿತಾ ಸಮಾಜದ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿದ ಆರೋಪದ ಹಿನ್ನೆಲೆ, ರಿಪ್ಪನ್ಪೇಟೆ ಸವಿತಾ ಸಮಾಜ ಘಟಕದಿಂದ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮಾಜದ ಸದಸ್ಯರು ನಾಡ ಕಚೇರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಸಿ.ಟಿ. ರವಿರವರು ತಕ್ಷಣವೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಾದ್ಯಂತ ಸಮಾಜದ ಬಾಂಧವರು…
ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್ಗಳ ರಕ್ತ ಸಂಗ್ರಹ
ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್ಗಳ ರಕ್ತ ಸಂಗ್ರಹ ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ನಡೆದ ಸ್ವಯಂ ಪ್ರೇರಿತ ಬಹುತ್ ರಕ್ತದಾನ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಒಟ್ಟು 62 ಯೂನಿಟ್ಗಳ ರಕ್ತ ಸಂಗ್ರಹಿಸಲಾಯಿತು. ಈ ಶಿಬಿರದಲ್ಲಿ ಸ್ಥಳೀಯ ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮಾನವೀಯತೆಯ ನಿಜವಾದ ಸಂದೇಶವನ್ನು ಸಾರಿದರು. ರಕ್ತದಾನದ ಮಹತ್ವವನ್ನು ಜನರಿಗೆ ತಲುಪಿಸುವ…
ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ
ಅಭಿಮಾನಿಗಳ ಹೃದಯದಲ್ಲಿ ಪುನೀತ್ ರಾಜ್ಕುಮಾರ್ ಎಂದೆಂದಿಗೂ ಶಾಶ್ವತ – ಜಿ ಆರ್ ಗೋಪಾಲಕೃಷ್ಣ ರಿಪ್ಪನ್ಪೇಟೆ : “ತಮ್ಮ ಅಭಿನಯ, ಸರಳತೆ ಮತ್ತು ಹೃದಯ ಶ್ರೀಮಂತಿಕೆಯ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಂದಿಗೂ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿದ್ದಾರೆ” ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಜಿ.ಆರ್ ಗೋಪಾಲಕೃಷ್ಣ ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್ನಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ನಡೆದ 3ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಪ್ಪು ಅವರ…
ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹುಂಚದಲ್ಲಿ ನಾಳೆ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹುಂಚಾ : ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶ್ರಯದಲ್ಲಿ, ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳ ಕೃಪಾಶೀರ್ವಾದ ಮತ್ತು ಮಾರ್ಗದರ್ಶನದಲ್ಲಿ, ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಸೇರಿದಂತೆ ವಿವಿಧ ಸಾಮಾಜಿಕ ಸಂಘ‧ಸಂಸ್ಥೆಗಳ ಸಹಯೋಗದಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ನಾಳೆ (29-10-2025) ನಡೆಯಲಿದೆ. ಶಿಬಿರವು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ಹುಂಚಾ ಪ್ರಾಥಮಿಕ…
RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…
“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”
“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…
SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ
SSLC ಅಂಕಪಟ್ಟಿಯಲ್ಲಿ ಶಾಲೆಯ ಹೆಸರು ಗೊಂದಲ – ರಾಮಕೃಷ್ಣ ವಿದ್ಯಾಲಯದಲ್ಲಿ ಪೋಷಕರ ದಿಢೀರ್ ಪ್ರತಿಭಟನೆ ರಿಪ್ಪನ್ಪೇಟೆ : ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿ ಶಾಲೆಯ ಹೆಸರೇ ಬದಲಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಂಭೀರ ಅನಾಹುತ ಉಂಟು ಮಾಡಲಿದೆ ಎಂಬ ಅಸಮಾಧಾನದಿಂದಾಗಿ, ರಿಪ್ಪನ್ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು. ಕಳೆದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದ ಬಳಿಕ ನೀಡಲಾಗುತ್ತಿರುವ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ವಿದ್ಯಾಲಯದ ಬದಲು ‘ಸರ್ಕಾರಿ ಪದವಿ ಪೂರ್ವ ಕಾಲೇಜು, ರಿಪ್ಪನ್ಪೇಟೆ’…
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು …
ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ
ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್ ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್ ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ ಚಿಂತನೆ ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …
ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ
ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…