ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ

ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ‌ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್‌ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ  ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ

ಹೊಸನಗರ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕಾರ Hosanagara PSI Shankar Gowda Patil has been transferred, while Santosh Bagoji has assumed charge as the new Police Sub-Inspector of Hosanagara Police Station. ಹೊಸನಗರ : ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ಅವರನ್ನು ತಕ್ಷಣದಿಂದ…

Read More

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read More

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…

Read More

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :

ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ  ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ  ಅಳಲನ್ನು ಹೇಳಿಕೊಳ್ಳುತ್ತಿದ್ದರು  ಎನ್ನಲಾಗಿದೆ.  ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.  ತೀರ್ಥಹಳ್ಳಿ ಪೊಲೀಸ್…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ

ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More