Headlines

ರೈತರ ಜಮೀನಿನಲ್ಲಿ ಬೋರ್‌ವೆಲ್‌ಗೆ ತಡೆ: ಹರತಾಳು ಹಾಲಪ್ಪ–ಶಾರದಾ ಪೂರ್ಯಾನಾಯ್ಕ ಮಧ್ಯಪ್ರವೇಶ

Farmers in Revachikoppa village near Kumsi protested after Forest Department officials stopped borewell drilling on agricultural land, leading to intervention by BJP leaders and talks over land record confusion. ಕುಂಸಿ ತಾಲ್ಲೂಕಿನ ಸಮೀಪದ ರೇವಚಿಕೊಪ್ಪ (ರೇಚಿಕೊಪ್ಪ) ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೊಳವೆ ಬಾವಿ (ಬೋರ್‌ವೆಲ್) ಕೊರೆಯಲು ಮುಂದಾದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಿದ ಘಟನೆ ಸೋಮವಾರ ನಡೆದಿದೆ. ಇದರಿಂದಾಗಿ ಗ್ರಾಮಸ್ಥ ರೈತರು ಅರಣ್ಯ ಇಲಾಖೆಯ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ರೋಚಕವಾಗಿದ್ದ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಒತ್ತಡದ ನಡುವೆಯೂ ರೋಚಕವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ತಮ್ಮ ಕಾರಿನಲ್ಲಿ ಕುಳಿತು ವೀಕ್ಷಣೆ ಮಾಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದ್ದು, ಯಡಿಯೂರಪ್ಪ ಅವರ ಐಪಿಎಲ್​ ಕ್ರೇಜ್​ ಅಚ್ಚರಿ ಮೂಡಿಸುತ್ತಿದೆ. ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಅವರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಸಿಎಂ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More