Headlines

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

2025ನೇ ಸಾಲಿಗೆ ಕರ್ನಾಟಕ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯುವ ಸಂಬಂಧ, ಇದೀಗ ಪ್ರವೇಶಾತಿ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದೆ. ಪ್ರಸ್ತುತ 5ನೇ ತರಗತಿ ಓದುತ್ತಿರುವವರು, ಮುಂದಿನ ವರ್ಷದಲ್ಲಿ ಈ ಕೆಳಗಿನ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಬಯಸಿದಲ್ಲಿ ಅರ್ಜಿ ಸಲ್ಲಿಸಿ. ಎಂಟ್ರ್ಯಾನ್ಸ್‌ ಪರೀಕ್ಷೆ ಬರೆಯುವ ಮೂಲಕ ಅರ್ಹತೆ ಪಡೆದು, ಈ ಶಾಲೆಗಳಲ್ಲಿ…

Read More

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More

ಉತ್ತರ ಪ್ರದೇಶ ಚುನಾವಣ ಪೂರ್ವ ಸಮೀಕ್ಷೆ:: ಬಿಜೆಪಿ ಮೂರಂಕಿ ದಾಟುವುದು ಕಷ್ಟ ಎನ್ನುತ್ತಿವೆ ಆಂತರಿಕ ಸಮೀಕ್ಷೆ !!!

ಲಕ್ನೋ: ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಸ್ಥಾನಗಳು ಸಿಗುವುದು ಕಷ್ಟ. ಬಿಜೆಪಿ ಸ್ವತಃ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಈ ಸಂಗತಿ ಹೊರಬಂದಿದೆ. ಈ ಕುರಿತು ಪತ್ರಿಕೆಯೊಂದು ಮಾಹಿತಿ ನೀಡಿದೆ. ಪತ್ರಿಕೆಯ ಪ್ರಕಾರ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಬಿಜೆಪಿ ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದು ಈ ಸಮೀಕ್ಷೆಯ ವರದಿಯಿಂದ ಬಿಜೆಪಿ ನಾಯಕರು ಮನಗಂಡಿದ್ದಾರೆ, ಆದ್ದರಿಂದ ಬಿಜೆಪಿ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಸಾಮೀಪ್ಯವನ್ನು ಹೆಚ್ಚಿಸಲು ಪ್ರಾರಂಭಿಸಿದೆ. ದೈನಿಕ್ ಭಾಸ್ಕರ್‌ನಲ್ಲಿ ಪ್ರಕಟವಾದ ವರದಿಯ…

Read More

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ…

Read More

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ

ಗಾಂಧಿ ಬಜಾರ್ ನಲ್ಲಿ ಎರಡು ಚೀಲ ಗೋಮಾಂಸ ಪತ್ತೆ SHIVAMOGGA | ಗಾಂಧಿ ಬಜಾರ್ ನ ಮಸೀದಿಯ ರಸ್ತೆಯಲ್ಲಿ ಮಾಂಸ ಸಾಗಾಣಿಕೆ ವೇಳೆ ಮೂವರ ನಡುವೆ ಗಲಾಟೆಯಾಗಿದ್ದು ಎರಡು ಮೂಟೆ ಮಾಂಸ ಮತ್ತು ಚರ್ಮ, ಗೋಮೂಳೆಗಳು ಪತ್ತೆಯಾಗಿದೆ.  ಗಾಂಧಿ ಬಜಾರ್ ನ ಮಸೀದಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಗೋಮಾಂಸ ಇದೆ ಎನ್ನಲಾದ ಎರಡು ಮೂಟೆಗಳನ್ನ ಹೊತ್ತು ಬರುವಾಗ ಈರ್ವರು ತಡೆದಿದ್ದಾರೆ. ಚೀಲವನ್ನ ಬಿಸಾಕಿ ತಡೆದ ವ್ಯಕ್ತಿಗೆ ಹೊಡೆದು ದ್ವಿಚಕ್ರ ವಾಹನ ಸವಾರಿಬ್ವರು ಪರಾರಿಯಾಗಿದ್ದಾರೆ.  ಈ ವೇಳೆ…

Read More

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ ಪದವಿಧರೆ. ಮನೆಯಲ್ಲಿಯೇ ಇದ್ದ ಯುವತಿಯ ಬಳಿ ಆಂಡ್ರಯ್ಡ್ ಮೊಬೈಲ್ ಹೊಂದಿದ್ದಳು.ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ಹೊಂದಿದ್ದ ಯುವತಿಗೆ ಪದೇ ಪದೇ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆತ್ತೆಲೆ ವಿಡಿಯೋ ಹಾಕದಿದ್ದರೆ ನಿನ್ನ ಫೋಟೊ ಎಡಿಟ್ ಮಾಡಿ ಬೆತ್ತಲೆಯಾಗಿ ರಚಿಸಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಗೆ ಬೆಚ್ಚಿಬಿದ್ದ…

Read More

ಗಬ್ಬು ನಾರುತ್ತಿದೆ ರಿಪ್ಪನ್ ಪೇಟೆಯ ಸಾರ್ವಜನಿಕ ಶೌಚಾಲಯ:

ರಿಪ್ಪನ್ ಪೇಟೆ: ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ. ಸುತ್ತ ಮುತ್ತ ನೂರಾರು ಹಳ್ಳಿಗಳ  ಕೇಂದ್ರಬಿಂದುವಾಗಿರುವ ರಿಪ್ಪನ್ ಪೇಟೆ ಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದ್ದು,ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.  …

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ವಿವಾಹಿತ ಮಹಿಳೆಗೆ ಪದೇ ಪದೇ ಕಿರುಕುಳ ನೀಡುತಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಸಾಗರ – ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಸಮೀಪದ ಶಿರವಾಳ ಗ್ರಾಮದ ರತನ್ ಕುಮಾರ್ ಎಂಬಾತ ಮಹಿಳೆಗೆ 2013ರಿಂದ ನಿರಂತರ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದನು. 2021ರಲ್ಲಿ ಸಾಗರದಲ್ಲಿ ಅಡ್ಡಗಟ್ಟಿ ಹಲ್ಲೆ ಸಹ ನಡೆಸಿದ್ದನು. ಈ ಸಂಬಂಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸಾಗರ ನಗರ ಠಾಣೆಯಲ್ಲಿ…

Read More

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ

ಸ್ವಾತಂತ್ರ್ಯೋತ್ಸವದ ಪರೇಡ್ ವೇಳೆ ಅಸ್ವಸ್ಥರಾಗಿ ಬಿದ್ದ ಮಕ್ಕಳು :  ನೆರವಿಗೆ ಧಾವಿಸಿದ  ಡಾ. ಧನಂಜಯ ಸರ್ಜಿ ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ ಪಥಸಂಚಲನಕ್ಕಾಗಿ ಆಗಮಿಸಿದ್ದರು. ಈ ವೇಳೆ ಪಥಸಂಚಲನದಲ್ಲಿ ಭಾಗಿಯಾಗಿದ್ದ 3 ಮಕ್ಕಳು ದಿಡೀರ್ ಕೆಳಗೆ ಬಿದ್ದಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ, ಅಲ್ಲಿಯೇ ಇದ್ದ ಸರ್ಕಾರಿ…

Read More
Exit mobile version