Headlines

ಬಗರ್ ಹುಕುಂ ಸಾಗುವಳಿ ಅರ್ಜಿದಾರರಿಗೆ ತಕ್ಷಣದಲ್ಲೇ ಸಾಗುವಳಿ ಚೀಟಿಯನ್ನು ನೀಡಿ : ಕಾಗೋಡು ತಿಮ್ಮಪ್ಪ

ಸಾಗರ :ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಪ್ರಕರಣಗಳ ಸಾಗುವಳಿ ಚೀಟಿಯನ್ನು ತಕ್ಷಣದಲ್ಲಿ ನೀಡುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರ ವತಿಯಿಂದ ಸಾಗರ ತಹಶೀಲ್ದಾರ್ ರಿಗೆ ಮನವಿಯನ್ನು ಸಲ್ಲಿಸಿದರು.  ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಮಾಜಿ ಸಚಿವರು ಮಾಜಿ ವಿಧಾನಸಭಾ ಅಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ  ರೈತರ ಬಗರ್ ಹುಕುಂ ಜಮೀನು ಗಳಿಗೆ ಅರ್ಜಿ ಸಲ್ಲಿಸಿ ಸಾಕಷ್ಟು ಸಮಯ ಆದರೂ ಕೂಡ ಇದುವರೆಗೂ ಸಾಗುವಳಿ ಚೀಟಿಯನ್ನು ನೀಡಿಲ್ಲ ರೈತರು ಅತಂತ್ರ…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಬೆಚ್ಚಿಬಿದ್ದ ಮರಳು ಮಾಫಿಯಾದವರು……! ಮರಳು ಸಂಗ್ರಹಿಸುವ ಪರಿಕರಗಳೊಂದಿಗೆ ಗವಟೂರು ಹೊಳೆಯ ದಡದಿಂದ ಎಸ್ಕೇಪ್ …!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಶರ್ಮಿಣ್ಯಾವತಿ ನದಿಯ (ಗವಟೂರು ಹೊಳೆ) ದಡದಲ್ಲಿ ಲಕ್ಷಾಂತರ ರೂಪಾಯಿ ಮರಳು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಮರಳು ಮಾಫಿಯಾದ ವಿರುದ್ಧ ಭಾನುವಾರ ಪೋಸ್ಟ್ ಮ್ಯಾನ್ ವರದಿ ಮಾಡಿತ್ತು. ಇದನ್ನು ಗಮನಿಸಿದ ಮರಳು ಮಾಫಿಯಾದವರು ಹಾಗೂ ಮರಳು ದಂಧೆಕೋರರು ಮರಳು ಸಂಗ್ರಹಣೆಗಾಗಿ ತಂದಿಟ್ಟಿದ್ದ ಪರಿಕರಗಳನ್ನು ತೆಗೆದುಕೊಂಡು ಕೆಲಸಗಾರರೊಂದಿಗೆ ಎಸ್ಕೇಪ್  ಆಗಿದ್ದಾರೆ. ರಿಪ್ಪನ್ ಪೇಟೆಯಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಗವಟೂರು ಹೊಳೆಯಲ್ಲಿ ಮರಳು ಮಾಫಿಯಾದವರು ಮರಳು ಸಂಗ್ರಹ ಮಾಡುತ್ತಿರುವ ವಿಷಯ ಕಂದಾಯ,ಅರಣ್ಯ, ಪೊಲೀಸ್,ಭೂ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಾದರೇ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಿ : ಕಾಗೋಡು ತಿಮ್ಮಪ್ಪ

ರಿಪ್ಪನ್‍ಪೇಟೆ: ಹಳೆಯ ಕಾಲ ಹೋಗಿದೆ, ಮೊದಲಿನ ಸ್ಥಿತಿ ಈಗಿಲ್ಲ ಕಾಂಗ್ರೇಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂದರೆ ಮುಖಂಡರುಗಳು ಪಕ್ಷದ ಇಚ್ಛಾನುಸಾರ ಸಂಘಟನೆ ಮಾಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೇಸ್ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೇಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಮುಖಂಡರುಗಳು ಕನಿಷ್ಟ ಒಂದು ತಿಂಗಳುಗಳ ಕಾಲ ಪ್ರತಿ ಬೂತ್‍ಗೆ ಹೋಗಿ ಕ್ರಿಯಾಶೀಲ ಕನಿಷ್ಟ 5 ಜನ ಕಾರ್ಯಕರ್ತರನ್ನು ಗುರುತಿಸಿ ಅವರ ಮುಖಾಂತರ ಸದಸ್ಯತ್ವ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More