Headlines

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ…

Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read More