Headlines

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ರೈತನ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಆಗ್ರಹ

Suspicious death of a leopard in Shikaripura after attacking a farmer raises poisoning concerns; forest officials suspect starvation while experts demand toxicology investigation. ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ತಡಸ ಗ್ರಾಮದ ನಿವಾಸಿ ರೈತ ಮುತ್ತಣ್ಣ ಸೇರಿದಂತೆ ಮೂವರ ಮೇಲೆ ದಾಳಿ ನಡೆಸಿದ್ದ ಚಿರತೆ ಇಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಭಾನುವಾರ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದ ಇದೇ ಚಿರತೆ, ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid

ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್‌ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ…

Read More

ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಈಶ್ವರಪ್ಪ  ಮತ್ತೆ ತಮ್ಮ ಹೇಳಿಕೆಯಿಂದ ವಿವಾದವನ್ನು ಸೃಷ್ಟಿಸಿದ್ದಾರೆ. ಈ ಬಾರಿಯ ಹೇಳಿಕೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವನ್ನು ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಈಶ್ವರಪ್ಪ, ಕೇಸರಿ ಧ್ವಜ ಕೆಂಪುಕೋಟೆ ಮೇಲೆ ಕೂಡ ಹಾರಿಸುತ್ತೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮುಂದೆ ನಮ್ಮ ದೇಶದಲ್ಲಿ ಕೇಸರಿ ಧ್ವಜವೇ ರಾಷ್ತ್ರ ಧ್ವಜವಾಗಬಹುದು. ಹಿಂದೆ ರಾಮ ಮಂದಿರ ಕಟ್ಟಲು ಆಗಲ್ಲ ಅಂದಿದ್ದರು ಈಗ ಕಟ್ಟಿಲ್ಲವ, ಹಾಗೇಯೇ ಮುಂದೊಂದು ದಿನ ಕೆಂಪು ಕೋಟೆಯ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದರು. ಅಧಿಕಾರದ…

Read More