Headlines

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

ರಿಪ್ಪನ್ ಪೇಟೆಯ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ವ್ಯಕ್ತಿ ಸಾವು:

ರಿಪ್ಪನ್ ಪೇಟೆ:ಇಂದು ಮಧ್ಯಾಹ್ನ ಮೂಗೂಡ್ತಿ ಸಮೀಪ  ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಕಾರ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ  ಓರ್ವ ಮಹಿಳೆ ಮೃತ ಪಟ್ಟಿದ್ದರು.ಉಳಿದ ಮೂವರ ಸ್ಥಿತಿ ಗಂಭೀರವಾಗಿತ್ತು, ಇದೀಗ ಶಿವಮೊಗ್ಗದ  ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೊರ್ವ ವ್ಯಕ್ತಿ ವಿಜೇಂದ್ರ ಭಂಡಾರಿ (60) ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ವಿಜೇಂದ್ರ ಭಂಡಾರಿ (60) ರಿಪ್ಪನ್ ಪೇಟೆಯ ಸಮೀಪದ ದೂನ ಮೂಲದ ನಿವಾಸಿಯಾಗಿದ್ದಾರೆ. ಟಾಟಾ ಸುಮೊ ತೀರ್ಥಹಳ್ಳಿ ರಸ್ತೆಯ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More

ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಹೆಚ್.ಎಸ್. ದಿನೇಶ್‌ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…

Read More

ರಿಪ್ಪನ್‌ಪೇಟೆ : ಬಾಳೂರು ತಿರುವಿನಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಗಾಯಾಳುಗಳು ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮದ ಹರತಾಳು ತಿರುವಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆಯಿಂದ ಗೇರುಬೀಸು ಕಡೆ ತೆರಳುತಿದ್ದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ಹಾಗೂ ಬಾಳೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಡಿಸ್ಕವರ್ ಬೈಕ್ ನಡುವೆ ಬಾಳೂರು ತಿರುವಿನ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗೇರುಬೀಸು ನಿವಾಸಿ ಮೋಹನ್(22) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಂದು ಬೈಕ್ ನಲ್ಲಿದ್ದ ಶುಂಠಿ ಕೆಲಸಕ್ಕೆ…

Read More

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More