ಸಾಮಾನ್ಯ ಸಭೆಯಲ್ಲಿ ಹೆಲ್ಮೆಟ್ ಧರಿಸಿ ಪ್ರತಿಭಟಿಸಿದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು
ಸಾಗರ : ಸಾಗರದ ನಗರಸಭೆಯಲ್ಲಿ ಬುಧವಾರ 2022-23 ನೇ ಸಾಲಿನ ಆಯವ್ಯಯ ಸಾಮಾನ್ಯ ಸಭೆಯನ್ನು ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಸಭೆಗೆ ಬಂದ ವಿರೋಧ ಪಕ್ಷದ ಕಾಂಗ್ರೆಸ್ ಸದಸ್ಯರು ಸಭೆ ಆರಂಭವಾಗುತ್ತಿದ್ದಂತೆ ತಲೆಗೆ ಹೆಲ್ಮೆಟ್ ಧರಿಸಿಕೊಂಡು ಪ್ರತಿಭಟಿಸಿದರು. ಇತ್ತೀಚೆಗೆ ಸಾಗರದ ಪ್ರತಿಷ್ಟಿತ ಎಲ್ ಬಿ ಕಾಲೇಜಿನ ಸರ್ವ ಸದಸ್ಯರ ಸಭೆಯಲ್ಲಿ ಶಾಸಕ ಹಾಲಪ್ಪ ಅವರ ಎದುರಲ್ಲೇ ಹಲ್ಲೆ ನಡೆದಿತ್ತು. ಈ ಘಟನೆಯನ್ನು ಈ ರೀತಿಯಾಗಿ ಖಂಡಿಸಲಾಯಿತು. ಆಡಳಿತ ಪಕ್ಷದವರಿಂದ ನಮಗೆ…