Headlines

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!

Konanduru | ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು!  ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ಕೋಣಂದೂರು ಸಮೀಪದ ಹಾದಿಗಲ್ಲಿ ಗ್ರಾಪಂ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾದಿಗಲ್ಲು ಸಮೀಪದ ಮೀನ್ಮನೆಕೊಪ್ಪ ಗ್ರಾಮದ ರಾಮಪ್ಪ(26) ಮೃತ ದುರ್ಧೈವಿಯಾಗಿದ್ದಾರೆ. ಕೋಣಂದೂರಿಗೆ ಕೆಲಸದ ನಿಮಿತ್ತ ತೆರಳಿದ್ದ ಯುವಕ ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ.  ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ?

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ? DK Shivakumar took oath as Karnataka’s 25th Chief Minister in the name of Veera Gangadhara Ajjayya. Here’s the story behind Ajjayya and the famous Nonavinakere Kadashiddeshwara Math. ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಈ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು…

Read More

ಕೋಡೂರು ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಿದ್ದಗಿರಿ ಸಮೀಪದ ಕ್ವಾರೆ ಕ್ರಾಸ್ ಗ್ರಾಮದಲ್ಲಿ ಸುಮಾರು 50 ರ ಪ್ರಾಯದ ಆಸುಪಾಸಿನ ವ್ಯಕ್ತಿಯ ಶವ  ದೊರೆತಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ದೌಡಾಯಿಸಿದ್ದು ತನಿಖೆ ಪ್ರಾರಂಭಿಸಿದ್ದಾರೆ. ಮೃತ ವ್ಯಕ್ತಿಯ ಬಗ್ಗೆಗಿನ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Read More

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್:

ಶಿವಮೊಗ್ಗ:  ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.   ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.   ಶಿವಮೊಗ್ಗದಲ್ಲಿ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read More