ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

ಜ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಫ಼್ಯೂ ರದ್ದು : ಶಾಲೆಗಳು ಪುನರಾರಂಭ !!!!

  ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.ಆದರೆ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ…

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ಹೆದ್ದಾರಿಪುರ : ಅರಣ್ಯ ಇಲಾಖೆಯ ದಾಳಿ – ಲಕ್ಷಾಂತರ ರೂ ಮೌಲ್ಯದ ತೇಗದ ತುಂಡುಗಳು ವಶಕ್ಕೆ….!! ಮರ ಕಡಿಸುವುದು ಅವರೇ ಹಿಡಿಯುವುದು ಅವರ ಕಡೆಯವರೇ!!!!..?????|FOREST

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸುಗಂಧರಾಜ್ ಎಂಬುವವರಿಗೆ ಸೇರಿದ ಮನೆಯ ಸಮೀಪದಲ್ಲಿ ಅಕ್ರಮ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಸುಮಾರು ರೂ. 2ಲಕ್ಷ ಮೌಲ್ಯದ ತೇಗದ ಮರದ ನಾಟ ಹಾಗೂ ಸೈಜ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಠಾಣೆ ವ್ಯಾಪ್ತಿಯಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅಕ್ರಮವಾಗಿ ಕಡಿದು, ಸ್ಶೆಜ್‌ಗಳಾಗಿ ಪರಿವರ್ತಿಸಿದ್ದು, ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ಮಾಡಿದಾಗ ಪ್ರಕರಣ…

Read More

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ

Ripponpete | ಪರಿಷತ್ ಚುನಾವಣೆ ಮತದಾನ ಮಾಡಿದ ಮಾಜಿ ಸಚಿವ ಹರತಾಳ ಹಾಲಪ್ಪ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲ್ಲಲಿದ್ದಾರೆ – ಆರಗ ಜ್ಞಾನೇಂದ್ರ  ರಿಪ್ಪನ್‌ಪೇಟೆ : ಇಂದು ನಡೆದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ  ಕ್ಷೇತ್ರ ಚುನಾವಣೆಯಲ್ಲಿ ರಿಪ್ಪನ್‌ಪೇಟೆ ಬೂತ್ ಸಂಖ್ಯೆ ೪೪ ರಲ್ಲಿ  ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪನವರು ಮೊದಲ ಮತ ಚಲಾಯಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ  ಪದವೀಧರ ಮತ್ತು ಶಿಕ್ಷಕರ  ಪ್ರಾಶಸ್ತö್ಯದ ಮತದಾನ…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More