Headlines

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ

ಶಿವಮೊಗ್ಗ ವಿದ್ಯಾರ್ಥಿನಿ ಪ್ರೇರಣಾ ರಾವ್‌ಗೆ ರಾಷ್ಟ್ರಮಟ್ಟದ ಗೌರವ Prerana Rao from Shivamogga wins gold medal in MSc Cyber Security and Digital Forensics at Rashtriya Raksha University’s 5th convocation held in Ahmedabad. ಶಿವಮೊಗ್ಗ, ಏ.16: ಅಹಮದಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವದಲ್ಲಿ ಶಿವಮೊಗ್ಗ ಮೂಲದ ಪ್ರೇರಣಾ ಕೆ. ರಾವ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂಎಸ್ಸಿ ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಫೊರೆನ್ಸಿಕ್ಸ್…

Read More

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು|leopard

ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯಿಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡುತ್ತಿದ್ದವು. ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಚಿರತೆಗಳ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ…

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More

ಹುಂಚದಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು : ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಹಾದಿಗಲ್ಲು ಸಮೀಪ ಪಲ್ಟಿ

ಹುಂಚದ ಕಟ್ಟೆ : ಇಲ್ಲಿನ ಈಶ್ವರ ದೇವಸ್ಥಾನದ ಮುಂಭಾಗ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಂಚದ ಕಟ್ಟೆ ನಿವಾಸಿ ಪುಟ್ಟಸ್ವಾಮಿ ಗೌಡ (70) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಹಿನ್ನಲೆ :  ಪುಟ್ಟಸ್ವಾಮಿ ಗೌಡ ಹುಂಚದಕಟ್ಟೆ ಈಶ್ವರ ದೇವಸ್ಥಾನದ ಎದುರು ನಡೆದುಕೊಂಡು ಹೋಗುತಿದ್ದಾಗ ಹಿಂಬದಿಯಿಂದ ಬಂದ ಮಾರುತಿ ಆಲ್ಟೋ ಕಾರು ವೃದ್ದನಿಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಅಲ್ಲಿಂದ …

Read More

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ

ಭಾರಿ ಗಾಳಿ–ಮಳೆ ಅಬ್ಬರ: ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ, ಹತ್ತಾರು ಮರಗಳು ನೆಲಕ್ಕುರುಳಿ ಅಪಾರ ಹಾನಿ Heavy rain and strong winds uprooted over 60 electricity poles and several trees in Ripponpet region, disrupting power supply to many villages. MESCOM teams are restoring electricity. ರಿಪ್ಪನ್‌ಪೇಟೆ, ಜುಲೈ 6: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಯ ಪರಿಣಾಮ ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ…

Read More

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More

ಕಾಂಗ್ರೆಸ್ ಸರ್ಕಾರ 10 ಕೆ ಜಿ ಅಕ್ಕಿ ವಿತರಣೆ ಮಾಡದಿದ್ದರೆ ಜನ ಒಪ್ಪಲ್ಲ – ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ…

Read More
Exit mobile version