Headlines

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಈ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿ,ಅವಿರೋಧವಾಗಿ ಆಯ್ಕೆಯಾದ ಮೂವರು ಸೇರಿದಂತೆ 12 ಸ್ಥಾನವನ್ನು ಪಡೆದಿದ್ದರು. ಇಂದು ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಆಡಳಿತ…

Read More

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read More

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ

ಬೈಕ್ ನಲ್ಲಿ ಹೋಗುತಿದ್ದವರ ಮೇಲೆ ಚೂರಿ ಇರಿತ – ಐವರ ಬಂಧನ ಶಿವಮೊಗ್ಗ: ನಿನ್ನೆ ಸಂಜೆ ನಗರದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜಾದ್ ಸೇರಿದಂತೆ ಇಬ್ಬರ ಮೇಲೆ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಪೊಲೀಸರು ಇಂದು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಿಥುನ್ ಕುಮಾರ್ ಜಿ.ಕೆ. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ಅಮ್ಜದ್ ಎಂಬುವವರ ಮೇಲೆ ಬೈಕ್‌ನಲ್ಲಿ ಬಂದ…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ಅಕಾಲಿಕ ಖಾಯಿಲೆಯಿಂದ ಬಳಲುತಿದ್ದ ಯುವತಿಗೆ ಸಹಾಯ ಹಸ್ತ::

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ನ ಚಂದಳ್ಳಿ ಗ್ರಾಮದ ಚಂದ್ರಮ್ಮ ರವರ 28 ವಯಸ್ಸಿನ ಪುತ್ರಿ ಚೇತನಳಿಗೆ ಬಾಲ್ಯದಿಂದಲು ಮದುಮೇಹ ಕಾಯಿಲೆ ಆವರಿಸಿದ್ದು,ಈ ಖಾಯಿಲೆಯಿಂದ ದೃಷ್ಟಿಯನ್ನು ಕಳೆದುಕೊಂಡಿದ್ದು,ನಡೆದಾಡುವ ಸ್ಥಿತಿಯಲ್ಲಿರದ ಮಗಳನ್ನು 28 ವರ್ಷದಿಂದ ತಾಯಿಯೊಬ್ಬರೇ ಕಷ್ಟದಿಂದ ಸಾಕುತಿದ್ದಾರೆ.ಈ ವಿಚಾರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರ ಗಮನಕ್ಕೆ ಬಂದ ತಕ್ಷಣ ಹುಂಚ ಮಠದ ಪರಮಪೂಜ್ಯ ಗುರುಗಳಾದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಲೆಗದ್ದೆ ಮಠದ ಪರಮಪೂಜ್ಯ…

Read More
Exit mobile version