ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ – ಒಂದೇ ಕುಟುಂಬದ 13 ಜನರ ಸಾವು   ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಶಿವಮೊಗ್ಗ ಮೂಲದ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಪೂನಾ – ಬೆಂಗಳೂರು ರಾಷ್ಟ್ರೀಯ…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು

HOSANAGARA | ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – ಬಸ್ ಚಾಲಕ ಹಾಗೂ ಮೂವರು ಶಿಕ್ಷಕಿಯರಿಗೆ ಗಂಭೀರ ಗಾಯ – 29 ಮಂದಿ ಆಸ್ಪತ್ರೆಗೆ ದಾಖಲು ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸು ಅಪಘಾತವಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ಇಂದು ನಡೆದಿದೆ. ಚಾಮರಾಜನಗರ ಯಳಂದೂರಿನ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಬಸ್ಸಿನ ಮುಂಭಾಗ…

Read More

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have criticised MLA Belur Gopalakrishna for allegedly remaining absent from Teachers’ Day celebrations and giving priority to a protest march in a neighbouring taluk. ಸಾಗರ: ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಗೈರಾಗಿರುವುದು ಶಿಕ್ಷಕ ಸಮುದಾಯಕ್ಕೆ ಹಾಗೂ ಭಾರತದ ಮಾಜಿ ರಾಷ್ಟ್ರಪತಿ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ಶಾಲಾ ವಾಹನ ಅಪಘಾತ – ಬಸ್ ಗಾಗಿ ಕಾಯುತಿದ್ದ ವ್ಯಕ್ತಿ ಸಾವು|accident

ಶಾಲಾ ವಾಹನಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮದಲ್ಲಿ ನಡೆದಿದೆ.  ಅಪಘಾತದಲ್ಲಿ ವಿಶ್ವನಾಥ ಕೊಟ್ರಪ್ಪ ಬಾಜಿಗೊಂಡರ್ (37) ಸಾವನ್ಬಪ್ಪಿರುವ ದುರ್ದೈವಿಯಾಗಿದ್ದಾನೆ. ಬಾಜಿಗೊಂಡರ್  ಹಾವೇರಿ ಜಿಲ್ಲೆಯ ಬೆಳವಗಿ ಗ್ರಾಮದ ನಿವಾಸಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ವಾಸಿಯಾದ ಬಾಜಿಗೊಂಡರ್ ಶಿವಮೊಗ್ಗದಲ್ಲಿ ಚಾಲಕ ‌ವೃತ್ತಿ ನಿರ್ವಹಿಸುತ್ತಿದ್ದ. ದಾವಣಗೆರೆ ಕಡೆ‌ ಹೋಗಲು ‌ಕೂಡ್ಲಿಗೆರೆಯ ಗ್ರಾಮ ಪಂಚಾಯಿತಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದನು. ಭದ್ರಾವತಿಗೆ ಬಂದು ಭದ್ರಾವತಿಯ ಮೂಲಕ ದಾವಣಗೆರೆಕಡೆ ಹೊರಡಲು ಸಜ್ಜಾಗಿದ್ದ ಬಾಜಿಗೊಂಡರ್ ಗೆ…

Read More

ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆ: ಶಾಸಕ ಹರತಾಳು ಹಾಲಪ್ಪ.

 ರಿಪ್ಪನ್ ಪೇಟೆ : ಶೈಕ್ಷಣಿಕ ಸೇವೆ ಸಮಾಜದಲ್ಲಿನ ಅತ್ಯುತ್ತಮ ಸೇವೆಯಾಗಿದ್ದು. ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ,ದಾರಿದೀಪವಾಗಿ ಮುನ್ನಡೆಸಿದ ಶಿಕ್ಷಕರನ್ನು ಮತ್ತು ಉಪನ್ಯಾಸಕರನ್ನು ಸಮಾಜ ಗೌರವಿಸುತ್ತದೆ ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು.  ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿ ಇಂದು ನಿವೃತ್ತರಾದ ಪ್ರೊ. ನಳಿನ್ ಚಂದ್ರ ಉಡುಪ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯಿಂದ  ಆಯೋಜಿಸಲಾಗಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಶೈಕ್ಷಣಿಕ ಸೇವೆಯಲ್ಲಿ ತೊಡಗಿಕೊಂಡಿರುವ ಪ್ರತಿಯೊಬ್ಬರಿಗೂ ಸಹ ಸಮಾಜವು…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More