Headlines

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಹೊಸನಗರ ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ ,ರಾಮಚಂದ್ರಪ್ಪ ಹಾಗೂ ಮಧುಸೂಧನ್ ಇದ್ದರು.

Read More

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ

ಇಂದಿನಿಂದ (ಮಾ.19 ರಿಂದ 24 ರವರೆಗೆ)  ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು

ಕಾರು ,ಆಟೋ ಮತ್ತು ಬೈಕ್ ನಡುವೆ ಡಿಕ್ಕಿ | ಇಬ್ಬರು ಸಾವು ಶಿವಮೊಗ್ಗ :  ಆನಂದಪುರದ ಸಮೀಪದ  ಹೊಸಗುಂದ ಬಳಿ ಭಾನುವಾರ  ರಾತ್ರಿ ಭೀಕರ ಅಪಘಾತ ಸಂಭವಿಸಿ  ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೊಸಗುಂದದ ಬಳಿ ತಿರುವಿನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರಿಗೂ…

Read More

SAGARA | ಹೋಳಿ ಆಚರಣೆ ವೇಳೆ ಕಿರಿಕ್  , ಓರ್ವ ಸಾವು : ಇಬ್ಬರ ವಿರುದ್ಧ ಪ್ರಕರಣ

SAGARA | ಹೋಳಿ ಆಚರಣೆ ವೇಳೆ ಹಲ್ಲೆ, ಸಾವು : ಇಬ್ಬರ ವಿರುದ್ಧ ಪ್ರಕರಣ ದಾಖಲು ಸಾಗರ: ಇಲ್ಲಿನ ಜೆಪಿ ಬಡಾವಣೆಯಲ್ಲಿ ಶುಕ್ರವಾರ ಹೋಳಿ ಆಚರಣೆ ನಡೆದ ಹಲ್ಲೆಯಲ್ಲಿ ಗಾಯಗೊಂಡಿದ್ದ  ವ್ಯಕ್ತಿ ಶುಕ್ರವಾರ ಮೃತಪಟ್ಟಿದ್ದಾರೆ. ಇಲ್ಲಿನ ಜೆ.ಪಿ. ನಗರದ ಕೂಲಿ ಕಾರ್ಮಿಕ ರಾಜು( 48) ಮೃತಪಟ್ಟವರು. ಹೋಳಿ ಹಬ್ಬ ಆಚರಣೆ ಸಂಧರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡಿದ್ದ ಕಾರ್ಮಿಕ ರಾಜು(48) ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಕಾಮ ದಹನದ ಸಂದರ್ಭದಲ್ಲಿ ರಾಜು ಅವರ ಮೇಲೆ ಮಧು ಮತ್ತು  ಮಾಲತೇಶ ಅವರು…

Read More

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮೂವರು ಮನೆಗಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ತೀರ್ಥಹಳ್ಳಿ: ತಾಲೂಕಿನ ಕಳಸ ಗುಂಡಿ ಗ್ರಾಮದ ಉಮೇಶ್ ಎನ್ನುವವರು ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದಾಗ ಅವರ ತಂದೆ ಮನೆಯಲ್ಲಿ ಇದ್ದರು ಅವರು ಮನೆಗೆ ಬೀಗ ಹಾಕಿಕೊಂಡು ತೋಟಕ್ಕೆ ಹೋಗಿ ಬಂದಾಗ ಅವರಿಗೆ ಶಾಕ್ ಆಗಿತ್ತು ಕಾರಣ ಅವರ ಮನೆಯ ಹಂಚನ್ನು ತೆಗೆದು ಬೀರುವಿನಲ್ಲಿ ಇಟ್ಟಿದ್ದ ಸುಮಾರು 4,93,000/- ರೂಗಳ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿರುತ್ತಾರೆ….

Read More

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!!

ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್‌ ವಶಕ್ಕೆ..!! ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ. ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭ ಘಟನೆ ನಡೆದ…

Read More

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು! ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ…

Read More
Exit mobile version