ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death

ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ  ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…

Read More

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!?

ಬಿ ವೈ ವಿಜಯೇಂದ್ರ ಕಾರಿಗೆ ಲಾರಿಗೆ ಡಿಕ್ಕಿ – ನಡೆದಿದ್ದೇನು.!!? ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಿನ್ನೆ ರಾತ್ರಿ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆ (ಶುಕ್ರವಾರ) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!!|Arrested

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆಗಳ್ಳರ ಬಂಧನ : ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನದ ಆರೋಪದ ಮೇರೆಗೆ ಶಿವಮೊಗ್ಗದ ಹಸೂಡಿ ಫಾರಂನ ನಿವಾಸಿ ಬಸಣ್ಣ ಯಾನೆ ಶರಫೀಯ ಎಂಬುವನನ್ನ ಬಂಧಿಸಿ 4.85 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ. ದಿನಾಂಕ:-16-02-2024 ರಂದು ಆನವಟ್ಟಿ ಗ್ರಾಮದ  ಸದಾಶಿವಗೌಡ, (64), ರವರ ವಾಸದ ಮನೆಯ ಬೀಗವನ್ನು ಮುರಿದು ಮನೆಯಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಕುರಿತು ಆನವಟ್ಟಿ ಪೊಲೀಸ್…

Read More

Ripponpete | ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಬುಧವಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ….

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More