Headlines

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ಮಗುವಿಗೆ ಎದೆಹಾಲು ಕಡಿಮೆಯಾಗಿದ್ದಕ್ಕೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು|crime news

ಮಗುವಿಗೆ ಹಾಲುಣಿಸಲು ಎದೆಹಾಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಪುಟ್ಟ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ ಶಾಂತಾ(28) ಅವರನ್ನು ಸಮೀಪದ ಜಡ್ಡೆಹಳ್ಳಿ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು. ಹೆರಿಗೆಯ ನಂತ್ರ ಆಕೆ ತವರು ಮನೆಯಾದಂತ ಕುಪ್ಪಗಡ್ಡೆಗೆ ಬಂದಿದ್ದರು. ಹೆರಿಗೆಯ ಬಳಿಕ ಶಾಂತಾಗೆ ಎದೆಹಾಲು ಬರುತ್ತಿರಲಿಲ್ಲ. ಬಂದರೂ ಒಂದೂವರೆ ತಿಂಗಳ ಮಗುವಿಗೆ ಸಾಕಾಗುವಷ್ಟು ಆಗುತ್ತಿರಲಿಲ್ಲ ಎನ್ನಲಾಗುತ್ತಿದೆ. ಈ ಕಾರಣದಿಂದ…

Read More

ಟ್ರಾನ್ಸ್‌ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ

ಟ್ರಾನ್ಸ್‌ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ ಶಿವಮೊಗ್ಗ , ಜು. 27: ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬೃಹದಾಕಾರದ ಮರವೊಂದು, ವಿದ್ಯುತ್ ಟ್ರಾನ್ಸ್’ಫಾರ್ಮರ್ ಮೇಲೆಯೇ ಉರುಳಿಬಿದ್ದ ಘಟನೆ ಜುಲೈ 27 ರ ಮಧ್ಯಾಹ್ನ ನಡೆದಿದೆ. ಆದಾಯ ತೆರಿಗೆ ಇಲಾಖೆ ಕಚೇರಿ ಪಕ್ಕದ ರಸ್ತೆಯಲ್ಲಿ ಘಟನೆ ನಡೆದಿದೆ. ಗಾಳಿ – ಮಳೆಯಿಂದ ಮರ ಉರುಳಿ ಬಿದ್ದಿದೆ. ಟ್ರಾನ್ಸ್‌ಫಾರ್ಮರ್ ಸೇರಿದಂತೆ ಕೆಲ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟಾವಶಾತ್ ಮರ ಬಿದ್ದ ವೇಳೆ ರಸ್ತೆಯಲ್ಲಿ ಜನ – ವಾಹನ ಸಂಚಾರದ ಪ್ರಮಾಣ…

Read More

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ತೀರ್ಥಹಳ್ಳಿ:ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ಜಾಥಾ

ತೀರ್ಥಹಳ್ಳಿ :ಕೇಂದ್ರ ಸರ್ಕಾರದ ಬೆಲೆ ಏರಿಕೆ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ಕಾಂಗ್ರೆಸ್ ವತಿಯಿಂದ  ನಡೆಯುತ್ತಿದ್ದು , ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ಶ್ರೀ  ಸಾಮಾನ್ಯ ಜನರ ಬಳಕೆಯ ವಸ್ತುಗಳಬೆಲೆಯನ್ನು ಯನ್ನು ನಿರಂತರವಾಗಿ  ಕೇಂದ್ರ ಸರಕಾರವು ಬೆಲೆ ಏರಿಕೆ ಇಂದು ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ದಲ್ಲಿ ಪ್ರತಿಭಟನೆ ನಡೆಸಲಾಯಿತು.  ಶಿವ ರಾಜಪುರದ ಗಣಪತಿ ದೇವಸ್ಥಾನದ ಮುಂಭಾಗದಿಂದ ಸ್ವತಃ ಕಿಮ್ಮನೆ ರತ್ನಾಕರ್ ಅವರು ಸೈಕಲ್ ಏರಿ ಪಟ್ಟಣದ ತಾಲ್ಲೂಕು ಕಚೇರಿಯ ವರೆಗೆ…

Read More

ರಾತ್ರೋರಾತ್ರಿ ಶಿವಮೊಗ್ಗದ ಮುನೇಶ್ವರ ದೇವಸ್ಥಾನದ ಬೀಗ ಒಡೆದು ಕಳ್ಳತನ :

ಶಿವಮೊಗ್ಗ :ಇಲ್ಲಿನ ತುಂಗಾ ನದಿ ತೀರದಲ್ಲಿರುವ ಅಪ್ಪಾಜಿರಾವ್ ಕಾಂಪೌಂಡ್’ನ  ಮುನೇಶ್ವರ ದೇವಸ್ಥಾನಲ್ಲಿ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ದೇಗುಲದ ಬೀಗ ಒಡೆದು ಕಳವು ಮಾಡಿದ್ದಾರೆ. ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಅಭರಣ, ನಗದು ದೋಚಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಮುಗಿಸಿದ ಬಳಿಕ ಆಡಳಿತ ಮಂಡಳಿಯವರು ಬೀಗ ಹಾಕಿ ತೆರಳಿದ್ದರು. ರಾತ್ರಿ ಕಳ್ಳರು ದೇಗುಲದ ಬೀಗು ಮುರಿದಿದ್ದಾರೆ. ಒಳಗಿದ್ದ ಎರಡು ಗಾಡ್ರೇಜ್ ಬೀರುವಿನ ಬೀಗಗಳನ್ನು ಒಡೆದಿದ್ದಾರೆ. ದೇವಸ್ಥಾನದ…

Read More

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು | Hosanagara

ಕಾಡುಕೋಣಗಳ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ. ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ. ಈಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು     ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…

Read More