Headlines

ರಿಪ್ಪನ್ ಪೇಟೆ: ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಂಜೂರಾದ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸಿ : ಗ್ರಾಪಂ ಸದಸ್ಯ ಆಸಿಫ಼್ ಭಾಷಾಸಾಬ್

ರಿಪ್ಪನ್ ಪೇಟೆ: ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿರುವ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸುವಂತೆ ಹಾಗೂ ಪೋಡಿ ಮಾಡಿಕೊಡುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯರಾದ ಬಿ ಆಸೀಫ಼್ ಜಿಲ್ಲಾಧಿಕಾರಿಗಳಿಗೆ ರಿಪ್ಪನ್ ಪೇಟೆ ಉಪ ತಹಶಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ 59 ರಲ್ಲಿ ರಿಪ್ಪನ್ ಪೇಟೆ ಜನತೆಯ ಬಹುದಿನಗಳ ಕನಸಿನ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಈ ಹಿಂದೆ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ 5 ಎಕರೆ ಜಾಗ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ಪ್ರಿಯಕರನ ಜೊತೆ ಸೇರಿ ಪತಿಯ ಕಥೆ ಮುಗಿಸಿದ ರೀಲ್ಸ್ ರಾಣಿ!

ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ! ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ್ದಾಳೆ.ಪತ್ನಿ ಪ್ರತಿಮಾ ಪತಿ 44 ವರ್ಷದ ಬಾಲಕೃಷ್ಣ ಪೂಜಾರಿಗೆ ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಈ ಸಂಬಂದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್‌ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಳೆದ 25 ದಿನಗಳಿಂದ ಬಾಲಕೃಷ್ಣ ಪೂಜಾರಿ ಅನಾರೋಗ್ಯದಿಂದ ಬಳಲುತ್ತಿದ್ದರು….

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು Final year B.Com student dies of heart attack Final year B.Com student dies of heart attack Final year B.Com student dies of heart attack ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿನಿಯೊಬ್ಬರು ದಿಡೀರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಮೂಲದ 22…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More