Headlines

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು ಗ್ರಾಮ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿ ನೀಡಲಿರುವ ಕಾರ್ಯಕ್ರಮದ ಅಂಗವಾಗಿ ಇಂದು ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನವದೆಹಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಆಯುಕ್ತರಾದ ಶಿಲ್ಪಾ ಶರ್ಮಾ ಇಂದು ಹೊಳಲೂರು ಗ್ರಾಮದ ಸ್ಪಚ್ಚ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ

ಅರಸಾಳು ಮಾಲ್ಗುಡಿ , ಅಮ್ಮನಘಟ್ಟ , ಗುಳುಗುಳಿಶಂಕರ ಸೇರಿದಂತೆ ಈ ಸ್ಥಳಗಳು ಅಧಿಕೃತ ಪ್ರವಾಸಿ ತಾಣಗಳು – ರಾಜ್ಯ ಸರ್ಕಾರ ಘೋಷಣೆ ರಾಜ್ಯ ಸರ್ಕಾರದ ಹೊಸ ಪ್ರವಾಸೋದ್ಯಮ ನೀತಿ 2024–29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಿ ಅಧಿಕೃತ ಘೋಷಣೆ ಮಾಡಲಾಗಿದೆ.ರಿಪ್ಪನ್ ಪೇಟೆ ಸಮೀಪದ ಮಾಲ್ಗುಡಿ ಮ್ಯೂಸಿಯಂ , ಗುಳುಗುಳಿಶಂಕರ , ಅಮ್ಮನಘಟ್ಟ ದೇವಸ್ಥಾನ ಸೇರಿದಂತೆ ಮಲೆನಾಡಿನ ಸೊಬಗುಳ್ಳ ತಾಣಗಳು ಶೀಘ್ರದಲ್ಲೇ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆಯಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು

ಆಸ್ಪತ್ರೆ ಮುಂಭಾಗದ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿರುವ ತೆರೆದ ನೀರಿನ ತೊಟ್ಟಿಯಲ್ಲಿ ಶುಕ್ರವಾರ ಮೂರು ವರ್ಷದ ಮಗು ಬಿದ್ದು ಮೃತಪಟ್ಟಿದೆ. ಮೃತ ಮಗು ಮತ್ತಿಕೋಟೆ ಗ್ರಾಮದ ನಿವಾಸಿ ಇಮ್ರಾನ್ ಪುತ್ರ ಮೊಹಮದ್ ಅಯಾನ್(3) ಎಂದು ತಿಳಿದು ಬಂದಿದೆ. ಇಮ್ರಾನ್ ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಂಬಂಧಿಕರ ಆರೋಗ್ಯ ವಿಚಾರಿಸಲು ಮಗುವನ್ನು ಜೊತೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More

ಅವ್ಯವಸ್ಥೆಯ ಆಗರ,ನಿರ್ವಹಣೆ ಇಲ್ಲದೆ ಹಾಳು ಕೊಂಪೆಯಾದ ರಿಪ್ಪನ್ ಪೇಟೆ ಬಸ್ ಪ್ರಯಾಣಿಕರ ತಂಗುದಾಣ !!

  ರಿಪ್ಪನ್ ಪೇಟೆ : ತಾಲೂಕಿನಲ್ಲೇ ಅತೀ ದೊಡ್ಡ ಗ್ರಾಮ ಪಂಚಾಯತ್, ಸ್ವಚ್ಚ ಭಾರತ್ ಅಭಿಯಾನದಲ್ಲಿ ಪ್ರಶಸ್ತಿ ಪಡೆದ ಪಂಚಾಯತಿ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣ ರಿಪ್ಪನ್ ಪೇಟೆ ಯಲ್ಲಿರುವ ಒಂದೇ ಒಂದು ಪ್ರಯಾಣಿಕರ ತಂಗುದಾಣ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದೆ. ರಿಪ್ಪನ್ ಪೇಟೆ ಜನತೆಯ ದಶಕದ ಬೇಡಿಕೆ ಬಸ್ ನಿಲ್ದಾಣ ರಾಜಕಾರಣಿ ಗಳ ಇಚ್ಚ ಶಕ್ತಿ ಕೊರತೆಯಿಂದ ಆಗದೆ ರಾಜಕಾರಣಿ ಗಳಿಗೆ ತಮ್ಮ ಎಲೆಕ್ಷನ್ ಸಮಯದ ಪ್ರಚಾರದ ಅಸ್ತ್ರಕ್ಕೆ ಸೀಮಿತ ವಾಗಿದೆ. ಸುಮಾರು ನಲವತ್ತು ಸಾವಿರಕ್ಕೂ ಹೆಚ್ಚು…

Read More

ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ….

Read More