Headlines

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು…

Read More

ಅಕ್ರಮ ಮರಳು ಅಡ್ಡೆ ಮೇಲೆ ದಿಡೀರ್ ದಾಳಿ

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಿಡೀರ್ ದಾಳಿ ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ

ಕೆಲಸದ ಆಮಿಷವೊಡ್ಡಿ ಲಾಡ್ಜ್ ನಲ್ಲಿ  ಮಹಿಳೆಯ ಅಕ್ರಮ ಬಂಧನ ಶಿವಮೊಗ್ಗ:  ಜಿಲ್ಲೆಯ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದಷ್ಟೆ ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಆರೋಪವೋಂದು ಉಡುಪಿಯಲ್ಲಿ ಕೇಳಿಬಂದಿದೆ. ಪ್ರಕರಣದಲ್ಲಿ ಲಾಡ್ಜ್‌ವೊಂದರಿಂದ ಬಂಧಿಯಾಗಿದ್ದ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಎಂಬಲ್ಲಿ ಲಾಡ್ಜ್‌ವೊಂದರಲ್ಲಿಯಲ್ಲಿ ಮಹಿಳೆಯೊಬ್ಬಳನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಲಾಗಿತ್ತು. ಅಲ್ಲದೆ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಶಿವಮೊಗ್ಗ ಮೂಲದ ಮಹಿಳೆಯನ್ನು, ಕೆಲಸ ಕೊಡಿಸುವ ನೆಪದಲ್ಲಿ ಇಲ್ಲಿಕೆ ಕರೆತಂದಿದ್ದ ವ್ಯಕ್ತಿಯು ಆಕೆಯನ್ನ ವೇಶ್ಯಾವಾಟಿಕೆಗೆ ತ‍ಳ್ಳಲು ಮುಂದಾಗಿದ್ದ. ಈ…

Read More

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್

ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪ್ರೋತ್ಸಾಹ ಅಗತ್ಯ – ಶ್ರೀಪತಿ ರಾವ್ ಸರ್ಕಾರಿ ಶಾಲೆಗೆ ಪೀಠೋಪಕರಣಗಳ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಸುಮಾರು 50 ಸಹಸ್ರ ರೂ ಮೌಲ್ಯದ ಡೆಸ್ಕ್ ಮತ್ತು ಲೈಬ್ರರಿ ಅಲ್ಮೇರಾ ಗಳನ್ನು ಮಕ್ಕಳಾದ ಹೆಚ್.ವಿ.ಶ್ರೀಪತಿರಾವ್ ಮತ್ತು ಇಂದುಮತಿ ಮತ್ತು ಕುಟುಂಬದವರು ಕೊಡುಗೆಯಾಗಿ ನೀಡಿದರು. ಕೊಡುಗೆಯಾಗಿ ನೀಡಿ ಮಾತನಾಡಿದ ಹೆಚ್.ವಿ.ಶ್ರೀಪತಿರಾವ್ ನಮ್ಮ ತಂದೆ…

Read More

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ – ಮಳಲಿ ಶ್ರೀಗಳು ರಿಪ್ಪನ್‌ಪೇಟೆ;-ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಸಮೀಪದ ಹೆದ್ದಾರಿಪುರ ಶ್ರೀರಾಮಕೃಷ್ಣ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಅವೇರ್‌ನೆಸ್ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಅಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ಪ್ರದರ್ಶನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಶಿಕ್ಷಣಕ್ಕೆ ಜಗತ್ತನ್ನು ಬದಲಾಯಿಸುವ ಶಕ್ತಿಯಿದ್ದು ಆರ್ಥಿಕ ಬೆಳವಣಿಗೆ ಸಾಮಾಜಿಕ. ಸಾಮರಸ್ಯ….

Read More

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

RIPPONPETE • ಸುಟ್ಟುಹೋದ ವಿದ್ಯುತ್ ಟಿಸಿ – ಐದು ದಿನಗಳಿಂದ ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ ರಿಪ್ಪನ್‌ಪೇಟೆ;-ಇಲ್ಲಿನ ಗವಟೂರು ಗ್ರಾಮದಲ್ಲಿ ಕಳೆದ ಐದಾರು ದಿನಗಳ ಹಿಂದೆ ಟಿಸಿ ಸುಟ್ಟುಹೋಗಿದ್ದು ಸಾರ್ವಜನಿಕರು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತ್‌ನಿಂದ ಪೈಪ್ ಲೈನ್ ಮೂಲಕ ಸರಬರಾಜು ಮಾಡಲಾಗುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರದೇ ಇದ್ದು ಈ ಕುರಿತು ಗ್ರಾಮಾಡಳಿತದ ಗಮನಕ್ಕೆ ತರಲಾದರೂ ಕೂಡಾ ಪ್ರಯೋಜನವಾಗಿಲ್ಲ ಮತ್ತು ಮೆಸ್ಕಾಂ ಇಲಾಖೆಯವರಿಗೆ ಸಾರ್ವಜನಿಕರು ಗವಟೂರು ಬಳಿಯಲ್ಲಿ…

Read More