Headlines

ಮತಾಂತರ ಆರೋಪ – ಪಾದ್ರಿ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು|protest

ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ಮನೆಗೆ ಬಜರಂಗ ದಳ ಮುತ್ತಿಗೆ ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ಮನೆಯಲ್ಲಿ ಬಜರಂಗ ದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಮನೆಯೊಂದರಲ್ಲಿ ಪ್ರತಿ ಭಾನುವಾರ ಹಿಂದೂಗಳನ್ನು ಕರೆಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಪಾದ್ರಿ ಮಣಿಕಂಠ ಮತ್ತವರ ತಂಡದವರು ಪ್ರತಿ ಭಾನುವಾರ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜನೆ ಮಾಡುತ್ತಿದ್ದರು. ಪ್ರಾರ್ಥನೆ ಆಯೋಜಿಸುತ್ತಿದ್ದವರ ವಿರುದ್ಧ…

Read More

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಎರಡು ಕಾರುಗಳ ನಡುವೆ ಅಪಘಾತ – ದುಬಾರಿ ಕಾರುಗಳು ಜಖಂ|Accident

ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ.  ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ. ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.  ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…

Read More