Headlines

ಗ್ರಾಮಠಾಣಾ ರಸ್ತೆಗೆ ಗೇಟ್ ನಿರ್ಮಾಣ ಮಾಡಿ ಬೀಗ ಹಾಕಿದ ಖಾಸಗಿ ವ್ಯಕ್ತಿ :

ರಿಪ್ಪನ್ ಪೇಟೆ: ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬ ಸಾರ್ವಜನಿಕರು ಓಡಾಡುವ ಗ್ರಾಮಠಾಣ ರಸ್ತೆಗೆ ಗೇಟ್ ನಿರ್ಮಾಣಮಾಡಿ ಬೀಗ ಹಾಕಿ ರೈತರು ತಮ್ಮ ಹೊಲಗದ್ದೆಗಳಿಗೆ ಓಡಾಡದಂತೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ. ಶಾಂತಪುರ ಮತ್ತು ಕೇಶವಪುರ ನಡುವಿನ ಹೊಸಹಳ್ಳಿ ಗ್ರಾಮದ ರೈತ ಕುಟುಂಬಗಳು ತಮ್ಮ ಹೊಲಗಳಿಗೆ ಹೋಗಲು ಕಳೆದ ಕೆಲವು ದಶಕಗಳಿಂದಲೂ ಗ್ರಾಮಠಾಣ ರಸ್ತೆಯನ್ನೇ ಅವಲಂಬಿಸಿಕೊಂಡಿದ್ದಾರೆ. ಆದರೆ ಕೆಲವು ದಿನಗಳ ಹಿಂದೆ ಹೊಸಹಳ್ಳಿಯ ಖಾಸಗಿ ವ್ಯಕ್ತಿಯೊಬ್ಬ  ಗ್ರಾಮ ಠಾಣದ ರಸ್ತೆಗೆ…

Read More

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ|smg riots

ಶಿವಮೊಗ್ಗದಲ್ಲಿ ಯಾವುದೇ ಎನ್‌ಕೌಂಟರ್‌ ನಡೆದಿಲ್ಲ,ಅದೆಲ್ಲಾ ಸುಳ್ಳು ಸುದ್ದಿ: ಎಸ್ಪಿ ಸ್ಪಷ್ಟನೆ ಶಿವಮೊಗ್ಗ: ರಾಗಿಗುಡ್ಡದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ…

Read More

ಸಾಗರ : ಮಹಿಳೆಗೆ ಅಮಿಷವೊಡ್ಡಿ ಮತಾಂತರಕ್ಕೆ ಯತ್ನ :ಇಬ್ಬರ ಬಂಧನ

ಶಿವಮೊಗ್ಗ : ಸಾಗರ ತಾಲೂಕಿನಲ್ಲಿ ಮತಾಂತರಕ್ಕೆ ಯತ್ನಿಸಿದ್ದ ಇಬ್ಬರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ತಾಲೂಕಿನ ತಾಳಗುಪ್ಪದಲ್ಲಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದ ಜೋಗ್‌ಫಾಲ್ಸ್‌ನ ಅನಿಲ್ ಕುಮಾರ್ ಹಾಗೂ ಪತ್ನಿ ಪ್ರಶಾಂತಿ ಅವರನ್ನು ಬಂಧಿಸಲಾಗಿದೆ. ಜ್ಯೋತಿ ಎಂಬುವವರ ಪತಿ ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅವರ ಮನೆಗೆ ಬಂದಿದ್ದ ಪ್ರಶಾಂತಿ ಮತ್ತು ಅನಿಲ್ ಕುಮಾರ್ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒತ್ತಾಯಿಸಿದ್ದರು ಎಂದು ಆರೋಪಿಸಲಾಗಿದೆ.  ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ…

Read More

ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso

ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್‌ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?

ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ.  ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಸಡಗರದಿಂದ ರಂಜಾನ್ ಆಚರಣೆ | ಸಾಮರಸ್ಯದಿಂದಲೇ ಸಮಾಜದಲ್ಲಿ ನೆಮ್ಮದಿ: ಮುನೀರ್ ಸಖಾಫಿ

Ramzan was celebrated with great enthusiasm in Ripponpet, with communal prayers at Eidgah grounds. Religious leader Muneer Sakhafi emphasized unity, peace, and harmony among all communities. ರಿಪ್ಪನ್‌ಪೇಟೆ: ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್‌ನ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಭಕ್ತಿ, ಸಡಗರ ಮತ್ತು ಸಂಭ್ರಮದಿಂದ ಆಚರಿಸಿದರು. ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೌಲಾನಾ ರಫೀದ್ ಹುಸೇನ್ ಅವರ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು….

Read More