ಬಂಕ್ ಬಾಲು ಹತ್ಯೆಗೆ ಪ್ರತೀಕಾರವಾಗಿ ಹಂದಿ ಅಣ್ಣಿ ಹತ್ಯೆ :ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟ ಆರೋಪಿಗಳು
ಜುಲೈ14 ರಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯ ವೃತ್ತದಲ್ಲಿ ಕುಖ್ಯಾತ ಪಾತಕಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ನಡುರಸ್ತೆಯಲ್ಲಿ ಅಣ್ಣಿಯನ್ನು ಹತ್ಯೆ ಮಾಡಿದ ಆರೋಪಿಗಳ ಶೋಧಕ್ಕೆ ಶಿವಮೊಗ್ಗ ಪೊಲೀಸರು 4 ತಂಡ ಕಟ್ಟಿಕೊಂಡು ಆಖಾಡಕ್ಕೆ ಇಳಿದಿದ್ದರು. ದುಷ್ಕರ್ಮಿಗಳ ಜಾಡು ಹಿಡಿದು ಶಿವಮೊಗ್ಗ ಪೊಲೀಸ್ರು ಬೆಂಗಳೂರು, ಕೊಡಗು, ಕಾರವಾರ ಸೇರಿದಂತೆ ಹಲವೇಡೆ ಶೋಧ ಸಹ ನಡೆಸುವ ವೇಳೆಯೇ 8 ಜನ ಕೊಲೆ ಆರೋಪಿಗಳು ಕಳೆದ ಸೋಮವಾರ ರಾತ್ರಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಶರಣಾಗಿದ್ದರು….