ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu
ರಿಪ್ಪನ್ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು. ರಿಪ್ಪನ್ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ…


