ಕಾರು ಕಳ್ಳತನ ಪ್ರಕರಣ – ತನಿಖೆ ನಡೆಸಿ ಕಾರು ಮಾಲೀಕನನ್ನೆ ಬಂಧಿಸಿದ ಪೊಲೀಸರು : ವಿಶೇಷ ಪ್ರಕರಣ ಇಲ್ಲಿದೆ ನೋಡಿ…..!!!|theft

ಕಾರು ಕಳ್ಳತನದ ಪ್ರಕರಣವೊಂದರಲ್ಲಿ  ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು. 14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ…

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಮೂವರ ಶವ ಎಂಟು ಗಂಟೆಗಳ ಕಾರ್ಯಾಚರಣೆ ಬಳಿಕ ಪತ್ತೆ Three workers trapped under a landslide in Gandhinagar, Tirthahalli, were found dead after an eight-hour rescue operation. Bodies shifted to Tirthahalli Government Hospital for postmortem. ತೀರ್ಥಹಳ್ಳಿ: ಪಟ್ಟಣದ ಗಾಂಧಿನಗರದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ…

Read More

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು

ANANDAPURA | ಚಂಪಕ ಸರಸ್ ನಲ್ಲಿ ಈಜಲು ಇಳಿದ ಯುವಕ ಸಾವು ಆನಂದಪುರ : ಇಲ್ಲಿನ ಮಹಂತಿನ ಮಠ ಚಂಪಕ ಸರಸ್ ನಲ್ಲಿ ಈಜಲು ಇಳಿದ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ. ಕುಶಾಲ್, ಸಾಯಿ ರಾಮ್ ಹಾಗೂ ಯಶ್ವಂತ್ ಎಂಬ ಯುವಕರು ಬೆಂಗಳೂರಿನಿಂದ ಕುವೆಂಪುರವರ ಮನೆಗೆ ತೆರಳುವ ಉದ್ದೇಶದಿಂದ ಟ್ರಿಪ್ ಪ್ಲಾನ್ ಮಾಡಿ ಬಂದಿದ್ದರು, ಶಿವಮೊಗ್ಗ ಸಮೀಪಿಸುತ್ತಿದ್ದಂತೆ ಕುಶಾಲ್ ರವರ ಸ್ನೇಹಿತ ಆನಂದಪುರ ಸಮೀಪ ಚಂಪಕ…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ

ಆನಂದಪುರ | ಅಕ್ರಮ ಜಾನುವಾರು ಸಾಗಾಟ – ಮೂವರು ವಶಕ್ಕೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಬಳಿ ಮೂರು ಜಾನುವಾರುಗಳನ್ನು  ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಆನಂದಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ದಿಂಡದಹಳ್ಳಿ ವಾಸಿಗಳಾದ ಬಸವರಾಜ್, ಮರಿಯಪ್ಪ, ಗುಡ್ಡಪ್ಪ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಿ ಬೈಲಿನಿಂದ ಆನಂದಪುರ ಕಡೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನವನ್ನು ಪಿಎಸ್ಐ ಪ್ರವೀಣ್ ನೇತೃತ್ವದ ತಂಡ ಪರಿಶೀಲಿಸಿದಾಗ, ಅಕ್ರಮವಾಗಿ ಹಿಂಸಾತ್ಮಕವಾಗಿ ಒಂದು ಎಮ್ಮೆ, ಒಂದು ಕೋಣನ ಮರಿ ಹಾಗೂ ಒಂದು ಹೋರಿ ಕರುವನ್ನು…

Read More