Headlines

ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್  ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.  ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ  ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.‌ ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರು ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗವಟೂರು ಸಮೀಪದ ಮಲ್ಲಾಪುರ ನಿವಾಸಿ ಬಿನು (19) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. https://youtu.be/Anq8r0tKKWY?si=MMQsI_j5OB6YQezZ ಘಟನೆಯ ಹಿನ್ನಲೆ : ಗವಟೂರು ಬಸ್ ನಿಲ್ದಾಣದ ಬಳಿಯಲ್ಲಿ ರಿಪ್ಪನ್‌ಪೇಟೆ…

Read More

ರಿಪ್ಪನ್‌ಪೇಟೆ – 4.86 ಕೋಟಿ ರೂ ವೆಚ್ಚದ ಬಾಲಕರ ವಸತಿ ನಿಲಯ ಲೋಕಾರ್ಪಣೆಗೊಳಿಸಿದ ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ದೇಶದಲ್ಲಿ ವಿದ್ಯಾರ್ಜನೆಗೆ ಪ್ರಸ್ತುತ ಸಂಧರ್ಭದಲ್ಲಿ ವಿಫುಲವಾದ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕಾಗಿದೆ,ನಮ್ಮ ದೇಶ ನಾಗಲೋಟದಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ಪಟ್ಟಣದಲ್ಲಿ 4 ಕೋಟಿ 86 ಲಕ್ಷ ರೂ ವೆಚ್ಚದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ತಮ್ಮ ಅಧಿಕಾರಾವಧಿಯಲ್ಲಿ ಸಾಗರ ಹೊಸನಗರ ಕ್ಷೇತ್ರದಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು…

Read More

ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja

ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.  ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ. ಹೊಂಬುಜ…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ

ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆ ತೀರ್ಥಹಳ್ಳಿ : ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿದೆ. ತೀರ್ಥಹಳ್ಳಿಯಲ್ಲಿ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತಿದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ಇಂದು ವರ್ಗಾವಣೆ ಮಾಡಲು ಸರ್ಕಾರ ಆದೇಶ ಮಾಡಿದ್ದು ಬಾಗಲಕೋಟೆಗೆ ವರ್ಗಾವಣೆ ಮಾಡಲಾಗಿದೆ. ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನರಾಗಿ ತೀರ್ಥಹಳ್ಳಿ ಉಪವಿಭಾಗದಲ್ಲಿ ಹಲವಾರು ಕಡೆ ದಾಳಿ ನಡೆಸಿ ಕೋಟ್ಯಾಂತರ ರೂ ಮೌಲ್ಯದ ಗಾಂಜಾವನ್ನು ವಶಕ್ಕೆ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ  (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…

Read More