ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder

ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್‌ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…

Read More

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 :  :  ಆಗಸ್ಟ್‌ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌ಅಚರಿಸಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು

ಜ್ಯೂಸ್ ಬಾಟಲ್ ನ ಮುಚ್ಚಳ ನುಂಗಿ ಮಗು ಸಾವು ಮನೆಯಲ್ಲಿ ಆಟವಾಡುತಿದ್ದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿ ಯಲ್ಲಿ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಪುತ್ರ ನಂದೀಶ್ ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ರಿಪ್ಪನ್‌ಪೇಟೆ : ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ಇಂದು ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಅರಿಶಿಣ ಕುಂಕುಮ ಮತ್ತು ಅರತಿ ಬೆಳಗಿ ಬಾಗಿನ ಅರ್ಪಿಸಿದರು. ಇದೇ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಗಿರೀಶ್ ಹಾಗೂ ಪಿಎಸ್‌ಐ ಶಿವಾನಂದ ಕೋಳಿ, ಎಎಸ್‌ಐ ಗಣಪತಿ,ಹಾಲಪ್ಪ,ಮಂಜಪ್ಪ ಹಾಗೂ ಇನ್ನಿತರ…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ…

Read More

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More