Headlines

ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ | Attack by Forest Officers on Karave Taluk President’s House

ಕರವೇ ತಾಲೂಕು ಅಧ್ಯಕ್ಷನ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಮ್ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು. ಜಿಂಕೆಯನ್ನು…

Read More

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ

Hosanagara | ಬಿ ವೈ ರಾಘವೇಂದ್ರ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ – ಹರತಾಳು ಹಾಲಪ್ಪ ಹೊಸನಗರ : ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ 400 ಕ್ಕೂ ಹೆಚ್ಚು ಸ್ಥಾನ ಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ದ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ದೇಶದಲ್ಲಿ ಪಕ್ಷ 400 ಕ್ಕು ಹೆಚ್ಚು ಸ್ಥಾನ ಗಳಿಸಿ ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗದ್ದುಗೆ…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ:  ರಾಜ್ಯಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ಹುಟ್ಟುಹಬ್ಬವನ್ನು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವುದರ ಮೂಲಕ 07-03-2025 ರಂದು ಅರ್ಥಪೂರ್ಣವಾಗಿ  ಆಚರಿಸಲಾಗುವುದು ಎಂದು ಕೆರೆಹಳ್ಳಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಎನ್ ಸತೀಶ್ ತಿಳಿಸಿದರು ಈ ಕುರಿತಾಗಿ ಇಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬಿಜೆಪಿ ಮುಖಂಡರುಗಳು ಹಾಗೂ ಹರತಾಳು  ಹಾಲಪ್ಪ ಅಭಿಮಾನಿ ಬಳಗ ಏರ್ಪಡಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು…

Read More