Headlines

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !???TTH

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !? ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲಿನಲ್ಲಿ ಮೊಬೈಲ್ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಿಥುನ್ ಶೆಟ್ಟಿ ( 22 ವರ್ಷ) ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಮಿಥುನ್ ಶೆಟ್ಟಿ ಉತ್ತಮ ಕ್ರಿಕೆಟ್ ಪಟುವಾಗಿದ್ದು, ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾಗಿರುವುದಾಗಿ ನೆರೆಹೊರೆಯವರ ಆರೋಪವಾಗಿದೆ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಸಾಲವನ್ನು…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ಬಾರ್ ಅಂಡ್ ರೆಸ್ಟೋರೆಂಟ್ ಸ್ಥಳಾಂತರ ವಿರೋದಿಸಿ ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ: ಶಾಸಕರಾದ ಹರತಾಳು ಹಾಲಪ್ಪರ ಮಧ್ಯಸ್ಥಿಕೆಯಿಂದ ಪರಿಹಾರ

ರಿಪ್ಪನ್ ಪೇಟೆ:: ಇಲ್ಲಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಪಟ್ಟಣದಿಂದ ಹೊರಗಿದ್ದ ಬಾರ್ ಗಳನ್ನು ಏಕಾಏಕಿ ವಿನಾಯಕ ವೃತ್ತದ ಬಸ್ ನಿಲ್ದಾಣದ ಪಕ್ಕದ ಅಂಗಡಿಯಲ್ಲಿ ತೆರೆದಿದ್ದು ಹಾಗೂ ತೀರ್ಥಹಳ್ಳಿ ರಸ್ತೆಯಲ್ಲಿ ಮತ್ತೊಂದು ಬಾರ್ ಅನ್ನು ತೆರೆಯಲು ಕಾಮಗಾರಿ ನೆಡೆಸುತ್ತಿದ್ದು. ಇದರಿಂದ ಸಾರ್ವಜನಿಕರಿಗೆ, ಶಾಲಾ-ಕಾಲೇಜು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ರಿಪ್ಪನ್ ಪೇಟೆ ಸಾರ್ವಜನಿಕರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕರಾದ ಹರತಾಳು ಹಾಲಪ್ಪ ನವರು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಅಬಕಾರಿ ಜಿಲ್ಲಾಧಿಕಾರಿ ಮತ್ತು ತಾಲೂಕು ಅಬಕಾರಿ…

Read More

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಈ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಜಯಭೇರಿ ಗಳಿಸಿ,ಅವಿರೋಧವಾಗಿ ಆಯ್ಕೆಯಾದ ಮೂವರು ಸೇರಿದಂತೆ 12 ಸ್ಥಾನವನ್ನು ಪಡೆದಿದ್ದರು. ಇಂದು ಪಟ್ಟಣದ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಆಡಳಿತ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು  ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವ ಆರೋಪದಲ್ಲಿ…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More

ಆಸ್ತಿ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ :

ಸಾಗರ ತಾಲೂಕಿನ ಹುಲಿದೇವರಬನ ಸಮೀಪ ಸಣ್ಣಕೊಪ್ಪ ಗ್ರಾಮದ ಗುರುಬಸಪ್ಪ ಎಂಬ ವ್ಯಕ್ತಿಯು ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿ ಎದುರು ಪಾರ್ಟಿಗಳಿಗೆ ಸಮನ್ಸ್ ಕಳುಹಿಸಿರುವ ಹಿನ್ನೆಲೆಯಲ್ಲಿ ಗುರುಬಸಪ್ಪ ರವರ ಮೇಲೆ  ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. >ಗುರುಬಸಪ್ಪ ಎಂಬ ವ್ಯಕ್ತಿಗೆ ಬೇಸೂರು ಗ್ರಾಮದ ಸರ್ವೆ ನಂಬರ್ 33 ರಲ್ಲಿ ಕುಟುಂಬದ ಹಿಸ್ಸೆ ಮೂಲಕ ಬರಬೇಕಾದ ಜಮೀನನ್ನು ಪಡೆಯುವ ಸಲುವಾಗಿ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಇದರಿಂದ ರೊಚ್ಚಿಗೆದ್ದ ಇದೇ  ಗ್ರಾಮದವರಾದ ರಾಮನಾಯ್ಕ,…

Read More