ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :
ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…