Headlines

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ಮೇ.31ರಂದು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ….

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್‌ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ

ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …

Read More

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ|sagara

ಕಾಂಗ್ರೆಸ್ ತೆಕ್ಕೆಗೆ ಜಾರಿದ ತ್ಯಾಗರ್ತಿ ಗ್ರಾಪಂ ಆಡಳಿತ ಚುಕ್ಕಾಣಿ – ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯ್ತಿಯಲ್ಲಿ ಗರಿಷ್ಠ ಸಂಖ್ಯೆಯ ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ಬುಧವಾರ ನಡೆದಿದ್ದು, ತಮ್ಮೊಳಗೆ ಅಡ್ಡ ಮತದಾನ ಮಾಡಿದವರನ್ನು ಪತ್ತೆ ಮಾಡಲು ಹೋದರೆ ಎಲ್ಲಾ ಎಂಟು ಜನ ಬಿಜೆಪಿ ಅನುಯಾಯಿಗಳೂ ಬಿಜೆಪಿಗೇ ಮತ ಹಾಕಿರುವುದಾಗಿ ಪ್ರಮಾಣ ಮಾಡುವ ಮೂಲಕ ಪಕ್ಷದ ನಾಯಕರನ್ನು ಹಾಗೂ ದೇವರನ್ನು ಗೊಂದಲದಲ್ಲಿ ಬೀಳಿಸಿದ…

Read More

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು | Soraba

ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಕಾಡುಕೋಣ ಸಾವು |  ಕೃಷಿ ಹೊಂಡದಲ್ಲಿ ಕಾಡುಕೋಣ ಬಿದ್ದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬವರ ಜಮೀನಿನ ಕೃಷಿ ಹೊಂಡದಲ್ಲಿ ಕಳೆದ ಗುರುವಾರ ರಾತ್ರಿ ನೀರು ಕುಡಿಯಲು ಬಂದ ಸಂದರ್ಭದಲ್ಲಿ  ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ಇನ್ನೂ ಕೃಷಿ ಹೊಂಡದಲ್ಲಿ ಸುಮಾರು 10 ಅಡಿ ಆಳದಷ್ಟು ನೀರು ತುಂಬಿದ್ದರಿಂದ ಕಾಡುಕೋಣ ಅಲ್ಲಿಯೇ ಸಾವನ್ನಪ್ಪಿದೆ.  ಶುಕ್ರವಾರ ಮನೆಯವರು…

Read More

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

Hosanagara | ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ

ಪುನೀತ್ ರಾಜ್‍ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…

Read More