Headlines

ಗವಟೂರು-ಮಾವಿನಸರ ಕಳಪೆ ರಸ್ತೆ ಕಾಮಗಾರಿ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ – ಅಧಿಕಾರಿಗಳಿಗೆ ತರಾಟೆ

ರಿಪ್ಪನ್‌ಪೇಟೆ : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುದಾನದ ಗವಟೂರು- ಮಾವಿನಸರ ರಸ್ತೆ ಕಾಮಗಾರಿ ಕಳೆಪೆಯಾಗಿದೆ ಎಂಬ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಾಗೂ ಹಲವು ಮಾಧ್ಯಮಗಳಲ್ಲಿ ಆರೋಪ ಬಂದ ಹಿನ್ನಲೆಯಲ್ಲಿ ಶಾಸಕ ಹಾಗೂ MSIL ಅಧ್ಯಕ್ಷ  ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ,ನೂತನ ತಂತ್ರಜ್ಞಾನ ಅಳವಡಿಕೆಯಿಂದಾಗಿ ಕಾಮಗಾರಿಯಲ್ಲಿ ಲೋಪ ಕಂಡುಬಂದಿದೆ. ರಸ್ತೆ ಅಂಚಿನಲ್ಲಿ ನೀರು ಸರಾಗವಾಗಿ ಹೋಗಲು ಬಾಕ್ಸ್ ಚರಂಡಿಯಲ್ಲಿ ರಂದ್ರ…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ

Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish. ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ ರಿಪ್ಪನ್‌ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು…

Read More

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು Two separate FIRs have been registered against a Shivamogga Police Sub-Inspector and a constable over allegations of sexual harassment and sexual assault. Investigations are underway in Chitradurga and Davanagere districts. ಶಿವಮೊಗ್ಗ, ಜೂನ್ 21: ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪಗಳ ಸಂಬಂಧ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು…

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ : ಬೇಳೂರು ಗೋಪಾಲಕೃಷ್ಣ|rpet news

ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ: ಬೇಳೂರು ರಿಪ್ಪನ್‌ಪೇಟೆ : ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಪ್ರಬಲ ಇಚ್ಚಾಶಕ್ತಿಯೊಂದಿಗೆ ಗ್ರಾಮೀಣ ಉದ್ಯಮಶೀಲತೆ ಅಭಿವೃದ್ಧಿ ಪಡಿಸಬೇಕು. ಇದಕ್ಕೆ ಬೇಕಾದ ಆರ್ಥಿಕ ಅನುದಾನ ಮತ್ತು ನೆರವನ್ನು ಸರ್ಕಾರ ನೀಡುತ್ತದೆ. ತನ್ಮೂಲಕ ಗ್ರಾಮೀಣ ಉದ್ಯಮ ಶೀಲತೆ ಅಭಿವೃದ್ಧಿಯಿಂದ ದೇಶದ ಸ್ವಾವಲಂಬನೆ, ಪ್ರಗತಿ ಮತ್ತು ಸಬಲೀಕರಣ ಸಾಧ್ಯವಾಗುತ್ತದೆ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಟ್ರೇಡರ್ಸ್ ಮತ್ತು ಅರ್ಥ್…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Accident | ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತಿದ್ದ ಕಾರು ಅಪಘಾತ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದ್ದ ಕಾರು ಅಪಘಾತ ಶಿವಮೊಗ್ಗ : ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದ್ದ ಕಾರು ಅಪಘಾತಕ್ಕೀಡಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸಚಿವರು ಸ್ವಲ್ಪದರಲ್ಲಿ ದುರಂತದಿಂದ ಪಾರಾಗಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರು ಕಾರಿನಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತವಾಗಿದ್ದು, ಲಾರಿ ಕಾರನ್ನು ತೀವ್ರವಾಗಿ ಉಜ್ಜಿಕೊಂಡಿದೆ. ಕಾರಿನಲ್ಲಿದ್ದ ಸಚಿವರು ಸೇರಿದಂತೆ ಮೂವರಿಗೂ ಯಾವುದೇ ಗಾಯಗಳಾಗಿಲ್ಲ. ಅಪಘಾತದಲ್ಲಿ…

Read More

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read More