ತೀರ್ಥಹಳ್ಳಿ: ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ
ತೀರ್ಥಹಳ್ಳಿ: ತಾಲೂಕಿನಲ್ಲಿ ಪುನರ್ವಸತಿ ಪಡೆದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಬದುಕುವ ಹಕ್ಕನ್ನು ಪುನಶ್ಚೇತನಗೊಳಿಸಲು ವಾಸದ ಮನೆಗಳಿಗೆ ಹಾಗೂ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವ ಕಾನೂನು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಹಣಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೆನಲ್ಲಿ, ಕರಕುಚ್ಚಿ, ಸಂಕ್ಲಾಪುರ, ಕೊಂಬಿನ ಕೈ ಮತ್ತು ದೆಂಬ್ಲಾಪುರ, ಕೋಣಂದೂರಿನ ಗ್ರಾಮಸ್ಥರು ಮತ್ತು ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ರೈತರು ಸೋಮವಾರ ಮನವಿ ನೀಡಿದರು. ಕಳೆದ ಸುಮಾರು ಎಪ್ಪತ್ತು ವರ್ಷಗಳಿಂದ ಶರಾವತಿ ವಿದ್ಯುತ್ ಯೋಜನೆ…