Headlines

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಅಡಿಕೆ ಸಸಿಗಳನ್ನು ನಾಶಗೊಳಿಸಿದ ಅರಣ್ಯಾಧಿಕಾರಿಗಳು ,ರೈತರ ಆಕ್ರೋಶ – ಸ್ಥಳಕ್ಕೆ ಆರಗ ಜ್ಞಾನೇಂದ್ರ ಭೇಟಿ

ಹೆದ್ದಾರಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸ.ನಂ. 30 ರಲ್ಲಿನ ಆರಣ್ಯ ಪ್ರದೇಶದಲ್ಲಿ ಸುಮಾರು 50-60 ವರ್ಷಗಳಿಂದ ಸ್ವಾದೀನಾನುಭವದಲ್ಲಿ ಜಮೀನು ಸಾಗುವಳಿ ಮಾಡುತ್ತಿರುವ ರೈತರ ಜಮೀನಿನಲ್ಲಿ ಅಡಿಕೆ ಸಸಿಗಳನ್ನು ತಿಳಿವಳಿಕೆ ನೀಡದೆ ಏಕಾಏಕಿ ನಾಶಗೊಳಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸಿದ್ದಾರೆಂದು ಶಾಸಕ ಅರಗ ಜ್ಞಾನೇಂದ್ರ ಆರೋಪಿಸಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ಸರ್ವೇ ನಂ 30 ರಲ್ಲಿ ಅರಣ್ಯ ಇಲಾಖೆಯವರು ಅಡಿಕೆ ಸಸಿಗಳನ್ನು ಕಿತ್ತು, ಕಡಿದು ಹಾಕಿದ ಸ್ಥಳಕ್ಕೆ ಭೇಟಿ…

Read More

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

HOSANAGARA | ಹುಲಿಕಲ್ ಬಳಿಯಲ್ಲಿ ವಾಹನ ಅಪಘಾತ, ಚಾಲಕ ಸ್ಥಳದಲ್ಲೇ ಸಾವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತ ಚಾಲಕನನ್ನು ಸಾಲಿಗ್ರಾಮದ ಗೋಪಾಲ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರದಿಂದ ಕುಂದಾಪುರದತ್ತ ಹೊರಟಿದ್ದ ವಾಹನ ಅಪಘಾತವಾಗಿದ್ದು ಘಟನೆಯಲ್ಲಿ ಕ್ಲೀನರ್ ಪ್ರಭಾಕರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಾಸ್ತಿಕಟ್ಟೆಯ…

Read More

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಶಿಕ್ಷೆ ಪ್ರಕಟ ಶಿವಮೊಗ್ಗ: ೨೦೨೪ ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವ್ಯಕ್ತಿಯೊಬ್ಬನು ೧೫ ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವನ್ನೆಸಗಿದ ಪ್ರಕರಣ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ ೨೦ ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ ೧,೬೧,೦೦೦/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ ೦೨ ವರ್ಷ ಹೆಚ್ಚುವರಿ ಸಾದಾ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ನೊಂದ ಬಾಲಕಿ ಹೇಳಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ

ಶಾಲೆಯ ನೀರಿನ ಟ್ಯಾಂಕ್‌ಗೆ ಕಳೆನಾಶಕ ಮಿಶ್ರಣ, ನಾಲ್ವರು ಮಕ್ಕಳು ಆಸ್ಪತ್ರೆಗೆ -ಹೂವಿನಕೋಣೆಯಲ್ಲಿ ಕಿಡಿಗೇಡಿಗಳ ಹೇಯ ಕೃತ್ಯ ಹೊಸನಗರ ತಾಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಹಾಕಿದ ಕ್ರೂರ ಕೃತ್ಯದಿಂದಾಗಿ ಮಕ್ಕಳ ಜೀವ ಅಪಾಯಕ್ಕೆ ಸಿಲುಕಿಸಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ವ್ಯಕ್ತಿಗಳು ಕಳೆನಾಶಕವನ್ನು ಹಾಕಿರುವ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್ ಇದ್ದು ಎರಡಕ್ಕೂ ಕಿಡಿಗೇಡಿಗಳು ಕಳೆನಾಶಕ ಮಿಶ್ರಣ ಮಾಡಿದ್ದಾರೆ ಒಂದರಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಕಳೆ…

Read More

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ

ಶಾಲಾ ಆವರಣದಲ್ಲಿ ಕಿಡಿಗೇಡಿಗಳ ಎಣ್ಣೆ ಪಾರ್ಟಿ – ಗ್ರಾಮಸ್ಥರ ಆಕ್ರೋಶ , ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಭೇಟಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಆವರಣದಲ್ಲಿ ರಾತ್ರಿ ವೇಳೆ ಕಿಡಿಗೇಡಿಗಳು ನುಗ್ಗಿ ಶಾಲಾ ಕಟ್ಟಡದ ಒಳಗೆ ಕುಡಿಯುವ ‘ಎಣ್ಣೆ ಪಾರ್ಟಿ’ ಮಾಡಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರ ಪ್ರಕಾರ, ಕಳೆದ ಹಲವು ದಿನಗಳಿಂದ ರಾತ್ರಿ ವೇಳೆ ಶಾಲೆ ಆವರಣದಲ್ಲಿ ಅನಾಮಿಕ…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು

ಬಿಎಸ್ಎನ್ಎಲ್ ಟವರ್‌ನಲ್ಲಿದ್ದ ₹2.8 ಲಕ್ಷ ಮೌಲ್ಯದ ಬ್ಯಾಟರಿ ಕಳವು ತೀರ್ಥಹಳ್ಳಿ, ಜುಲೈ 30: ತೀರ್ಥಹಳ್ಳಿ ತಾಲೂಕಿನ ಬಸವಾನಿ ಗ್ರಾಮದಲ್ಲಿರುವ ಬಿಎಸ್‌ಎನ್‌ಎಲ್ ಮೊಬೈಲ್ ಟವರ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬ್ಯಾಟರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜುಲೈ 25 ರಂದು ಸಂಜೆ ಟವರ್‌ನ್ನು ಪರಿಶೀಲಿಸಲು ಬಂದ ಸಂದೀಪ್ ಮಳ್ಳಿಗಾರ ಅವರಿಗೆ ಬ್ಯಾಟರಿಗಳು ಕಳವಾಗಿರುವುದು ಗೊತ್ತಾಯಿತು. ಈ ಬಗ್ಗೆ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಒಟ್ಟು ₹2.8 ಲಕ್ಷ ಮೌಲ್ಯದ 2 ವೋಲ್ಟ್ ಸಾಮರ್ಥ್ಯದ 24 ಬ್ಯಾಟರಿಗಳು ಕಳವು ಆಗಿವೆ….

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More