ರಿಪ್ಪನ್ಪೇಟೆಯಲ್ಲಿ ನೂತನ ಕಿರಣ್ ಹೆಲ್ತ್ ಕೇರ್ ಪ್ರಾರಂಭ : ಲಕ್ಷಾಂತರ ಸಂಬಳ ತಿರಸ್ಕರಿಸಿ ಹುಟ್ಟೂರಲ್ಲೇ ಸೇವೆ ಸಲ್ಲಿಸಲು ಮುಂದಾದ MBBS ವೈದ್ಯ
ರಿಪ್ಪನ್ ಪೇಟೆ: ಸಮಾಜದಲ್ಲಿನ ದುರ್ಬಲ ವರ್ಗದವರು ಮತ್ತು ಬಡವರ ಉತ್ತಮ ಆರೋಗ್ಯಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಿದ್ದೇನೆ ಎಂದು ಡಾ. ಕಿರಣ್ ಶಾಸ್ತ್ರಿ ಹೇಳಿದರು. ರಿಪ್ಪನ್ ಪೇಟೆ ಪಟ್ಟಣ ವಿನಾಯಕ ವೃತ್ತದಲ್ಲಿ ನೂತನವಾಗಿ ಆರಂಭವಾಗಿರುವ ಕಿರಣ್ ಶಾಸ್ತ್ರಿ ಹೆಲ್ತ್ ಕೇರ್ ನಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ವೈದ್ಯಕೀಯ ವೃತ್ತಿಯು ಸಮಾಜದಲ್ಲಿ ಗೌರವಾನ್ವಿತ ವೃತ್ತಿಯಾಗಿದ್ದು, ಸಮಾಜದಲ್ಲಿನ ನಾಗರಿಕರಿಗೆ ಉತ್ತಮ ಆರೋಗ್ಯದ ಅರಿವನ್ನು ಮೂಡಿಸಲು ಈ ವೃತ್ತಿ ಸಹಕಾರಿಯಾಗಿದೆ ಎಂದ ಅವರು ರಿಪ್ಪನ್ ಪೇಟೆ…