Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜ.23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/01/23 ಮತ್ತು 24/01/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಲಿಲೋ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Read More

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ RIPPONPETE | ಖಾಸಗಿಯವರು ಒತ್ತುವರಿ ಮಾಡಬಾರದ ಉದ್ದೇಶದಿಂದಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಕಾಯ್ದಿರಿಸಲಾದ 5 ಎಕರೆ ಜಾಗವನ್ನು ಪೋಡಿ ಮಾಡುವ ಮೂಲಕ ಪೆನ್ನಿಂಗ್ (ಬೇಲಿ) ಅಳವಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಆಸ್ಪತ್ರೆಯನ್ನು ಸಮುದಾಯ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದೆಂದು ಶಾಸಕ , ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆಯ…

Read More

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್‌ ಈಶ್ವರಪ್ಪ ನವರ ಪರ…

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More

ಪಂಜಾಬ್ ಸರ್ಕಾರದ ವಿರುದ್ಧ ಹೆದ್ದಾರಿಪುರದಲ್ಲಿ ಪಂಜಿನ ಮೆರವಣಿಗೆ

ಹೆದ್ದಾರಿಪುರ : ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿರುವ ಮತ್ತು ಅವರ ಪ್ರಯಾಣಕ್ಕೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವ ಪಂಜಾಬ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಹೆದ್ದಾರಿಪುರದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಘಟಕದ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ  ಮಂಜುನಾಥ್ ಎಂ,ಬಿ, ಪಕ್ಷದ ಹಿರಿಯ ಮುಖಂಡರಾದ ಸುರೇಶ್ ಸಿಂಗ್,ಕೀರ್ತಿ ಗೌಡ್ರು, ಪಂಚಾಯತ್ ಪ್ರಮೂಕ್ ಆದರ್ಶ ಡಿ ಗೌಡ, ಕಲ್ಲೂರ್ ಗಂಗಾಧರ್,ಪ್ರವೀಣ್ ಬಟ್, ಸಂತೋಷ್ ಕಲ್ಕೂಪ್ಪ, ಮಂಜುನಾಥ್ ಶೇಟ್ ಹೆದ್ದಾರೀಪುರ, ರಾಮಣ್ಣ , ಕಿರಣ್ ಕಣಬಂದೂರು,ಅರುಣ್…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More
Exit mobile version