ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ
ಒಕ್ಕಲಿಗರ ಸಂಘ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ಪೇಟೆ: ಹೊಸನಗರ ತಾಲ್ಲೂಕಿನ ಒಕ್ಕಲಿಗರ ಸಮಾಜವು ಜನಸಂಖ್ಯೆಯಲ್ಲಿ ಕಡಿಮೆಯಾದರೂ ಜನಹಿತ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಬಡವರ ಸಹಾಯಕ್ಕೆ ಸದಾ ಕೈಚಾಚಿ ಸಮಾಜದಲ್ಲಿ ಮಾದರಿಯಾಗುತ್ತಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಭಿಪ್ರಾಯಪಟ್ಟರು. ರಿಪ್ಪನ್ಪೇಟೆಯ ವಿಶ್ವಮಾನವ ಒಕ್ಕಲಿಗರ ಸಭಾಭವನದ ಹಿಂಭಾಗದಲ್ಲಿ ನೂತನ ಅಡುಗೆ ಕೊಠಡಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಒಕ್ಕಲಿಗ ಸಮಾಜವು ತನ್ನ ಸಂಘಟನೆಯೊಂದಿಗೆ ಇತರ ಸಮಾಜಗಳನ್ನೂ ಪ್ರೀತಿ–ವಿಶ್ವಾಸದಿಂದ ಸ್ವೀಕರಿಸುತ್ತದೆ. ಕುವೆಂಪುರವರ…