ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ
ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಣ್ಣಪ್ಪನವರ…