Headlines

ಕಾರು ಕಳ್ಳತನ ಪ್ರಕರಣ – ತನಿಖೆ ನಡೆಸಿ ಕಾರು ಮಾಲೀಕನನ್ನೆ ಬಂಧಿಸಿದ ಪೊಲೀಸರು : ವಿಶೇಷ ಪ್ರಕರಣ ಇಲ್ಲಿದೆ ನೋಡಿ…..!!!|theft

ಕಾರು ಕಳ್ಳತನದ ಪ್ರಕರಣವೊಂದರಲ್ಲಿ  ದೂರು ನೀಡಿದ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಆರೋಪಿ ಕಾರಿನ ಮಾಲೀಕ ಕಾರಿನ ಲೋನ್ ಹಣ ಕಟ್ಟದೆ ಫೈನಾನ್ಸ್ ಸಂಸ್ಥೆಗೆ ವಂಚಿಸಲು ಮತ್ತು ಇನ್ಸುರೆನ್ಸ್ ಹಣಕ್ಕಾಗಿ ತನ್ನ ಕಾರಿನ ನಂಬರ್ ಬದಲಾಯಿಸಿ, ಸ್ನೇಹಿತನ ಬಳಿ ಕೊಟ್ಟು ಕಳ್ಳತನದ ದೂರು ನೀಡಿದ್ದ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಶಿವಮೊಗ್ಗ ವಿದ್ಯಾನಗರದ ಚಂದ್ರು ಕುಮಾರ (28), ದಾವಣೆಗೆರೆ ಸರಸ್ವತಿ ನಗರದ ಪ್ರಶಾಂತ್ (29) ಬಂಧಿತರು. 14 ಮೇ 2022 ರಂದು ಸೂಳೆಬೈಲು ಸಮೀಪದ ಕುಂಚಿಟಿಗರ…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ

ಸಿದ್ದರಾಮಯ್ಯ ಬೆಂಬಲಿಸಿ ಶಿಕಾರಿಪುರದಲ್ಲಿ ಅಹಿಂದ ಸಂಘಟನೆ ಕರೆ ನೀಡಿದ್ದ ಬಂದ್‌ ಯಶಸ್ವಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕುತಂತ್ರ ಖಂಡಿಸಿ ಶಿಕಾರಿಪುರ ತಾಲ್ಲೂಕು ಅಹಿಂದ ಸಂಘಟನೆ ಕರೆ ನೀಡಿರುವ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದ್ದು, ಶಿಕಾರಿಪುರ ಪಟ್ಟಣದಲ್ಲಿ ಅಹಿಂದ ಸಂಘಟನೆ ಆಶ್ರಯದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಬಿಜೆಪಿ ಕುತಂತ್ರ ರಾಜಕೀಯ ಮಾಡುತ್ತಿದೆ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

SSLC RESULT | ಆಯನೂರಿನ  ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ Vatsalya International School in Ayanur, Shivamogga records 100% SSLC results for 2025-26, with 34 students passing and top scores led by Deekshit G. ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಈ ಸಾಧನೆ ಶಿಕ್ಷಣ…

Read More

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು

ಆನಂದಪುರ ; ‘ಪ್ರಾಚೀನ ಬಂಗಾರದ ನಾಣ್ಯ’ ಹೆಸರಿನಲ್ಲಿ ₹9.60 ಲಕ್ಷ ವಂಚನೆ – ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಖದೀಮರು A Mysuru man was allegedly cheated of ₹9.60 lakh in Shivamogga after fraudsters lured him with a fake deal involving ancient gold coins and treasure. Police have registered a case and launched an investigation. ಶಿವಮೊಗ್ಗ: ಹಳೆಯ ಕಾಲದ ನಿಧಿ ಹಾಗೂ ಪ್ರಾಚೀನ ಬಂಗಾರದ…

Read More

ಅಪ್ರಾಪ್ತನಿಂದ ಬೈಕ್‌ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty

ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.  17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ…

Read More

Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್

ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್  ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು  ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು  ಹೇಳಿದರು ಪಟ್ಟಣದ ಸರಕಾರಿ  ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ|wild

ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು, ಕೋಯ್ಲು ಮಾಡಿ ಹಾಕಿದ್ದ ಭತ್ತ, ಹುಲ್ಲು ಹಾಗೂ ಕೊಳವೆ ಬಾವಿಗೆ ಅಳವಡಿಸಿದ್ದ ಪೈಪ್ ಲೈನ್ ದ್ವಂಸಗೊಳಿಸಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ ಏರಿ ಒಡೆದು ಬೆಳೆ…

Read More