ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500 after his 16-year-old son was found driving a Mahindra Bolero on Thirthahalli Road. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮಹೀಂದ್ರಾ ಬೊಲೆರೊ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಾದ ತಂದೆಗೆ ಶಿವಮೊಗ್ಗ ನ್ಯಾಯಾಲಯ ₹26,500 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ..!!ವೀಡಿಯೋ ವೈರಲ್|excise

ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಸವಾಪುರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟಗಾರನಿಗೆ ಮಹಿಳೆಯರಿಂದ ಪೊರಕೆ ಸೇವೆ ನಡೆದಿರುವ ಘಟನೆ ನಡೆದಿದೆ. ಬಸವಾಪುರ ಗ್ರಾಮದ ಅಕ್ರಮ ಮದ್ಯ ಮಾರಾಟಗಾರನೊಬ್ಬನಿಗೆ ಮಹಿಳೆಯರು ಪೊರಕೆ ಸೇವೆ ಮಾಡಿದ ವೀಡಿಯೋ ವೈರಲ್ ಆಗಿದೆ. ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಗಂಡಂದಿರ ಕಾಟ ತಾಳಲಾರದೆ ಅಕ್ರಮ ಮದ್ಯ ಮಾರಾಟಗಾರನಿಗೆ ಪೊರಕೆ ಸೇವೆ ಮಾಡಿದ್ದಾರೆ. ಅಬಕಾರಿ ಅಧಿಕಾರಿಗಳಿಗೆ ಎಷ್ಟೇ ಬಾರಿ ಮನವಿ ಮಾಡಿದರು…

Read More

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of MLA Beluru Gopalakrishna staged a protest in Sagar after he was denied a ministerial berth, burning tyres and blocking the highway. Several Congress leaders have resigned from their party posts in protest. ಸಾಗರ: ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ದೊರೆಯದ…

Read More

ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

Ripponpete | ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ..!!

ಕೋಳಿ ತ್ಯಾಜ್ಯಗಳಿಂದ ಮಲೀನವಾಗುತ್ತಿರುವ ಗವಟೂರು ಹೊಳೆಯ ನೀರು – ಕಣ್ಮುಚ್ಚಿ ಕುಳಿತಿದೆ ಗ್ರಾಮಾಡಳಿತ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ ಪದೇಶಗಳ ಜೀವನದಿಯಾಗಿರುವ ಶರ್ಮಣ್ಯಾವತಿ(ಗವಟೂರು ಹೊಳೆ) ನದಿ ಗ್ರಾಮಾಡಳಿತದ ದಿವ್ಯ ನಿರ್ಲಕ್ಷ್ಯದಿಂದ  ದಿನೇ ದಿನೆ ಕಲುಷಿತಗೊಳ್ಳುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಶರ್ಮಣ್ಯಾವತಿ ನದಿಯ ಎರಡು ಇಕ್ಕೆಲಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವ ಮೂಲಕ ಕಿಡಿಗೇಡಿಗಳು ತಮ್ಮ ವಿಕೃತಿಯನು ಮೆರೆಯುತಿದ್ದು,ಸೂರ್ಯೋದಯಕ್ಕೂ ಮುಂಚೆಯೆ ನದಿಯ ಬಳಿ ಬಂದು ತ್ಯಾಜ್ಯ ಎಸೆಯುತ್ತಾರೆ. ಕಸ, ಕಡ್ಡಿಗಳು, ಮದ್ಯದ ಬಾಟಲಿಗಳು, ವಿವಿಧ ತ್ಯಾಜ್ಯಗಳು, ಪ್ಲಾಸ್ಟಿಕ್‌ಗಳು, ಮನೆಯ ತ್ಯಾಜ್ಯವೂ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ :  ಚಲಿಸುತ್ತಿದ್ದ ಬಸ್‌ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಡೂರು ಸಮೀಪದ ಶಾಂತಪುರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಧಿಕ ಜನರಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಗುರುಶಕ್ತಿ ಬಸ್‌ ಗೆ ಕೀಳಂಬಿ ನಿಲ್ದಾಣದಲ್ಲಿ ಮಗುವಿನೊಂದಿಗೆ…

Read More

ತೀರ್ಥಹಳ್ಳಿ ಪೊಲೀಸರಿಂದ ಗಾಂಜಾ ಬೇಟೆ !!! ಪಶ್ಚಿಮ ಬಂಗಾಳ ಮೂಲದ ನಾಲ್ವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ  ಮೂಲದ ನಾಲ್ವರನ್ನು ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ.   ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.  ಪಶ್ಚಿಮ ಬಂಗಾಳ ಮೂಲದವರಾದ ಬಾಷಾ ಸರ್ಕಾರ್, ಅಲೋಕ್ ಮಂಡಲ್, ಅಮೃತ್ ಮಂಡಲ್, ಸಂಕರ್…

Read More