Headlines

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More

ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ

ಬಸ್ ಮತ್ತು ಲಾರಿ ಅಪಘಾತ – ಬಸ್ ಚಾಲಕನ ಅಜಾಗರೂಕತೆಗೆ ತನ್ನ 12 ಹಲ್ಲು ಮುರಿದಿದೆ ಎಂದು ದೂರು ಸಲ್ಲಿಸಿದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರೊಬ್ಬರು ದೂರು ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ 12 ಹಲ್ಲುಗಳು ಮುರಿದಿವೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ…

Read More

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನಗಳ ಹುತ್ತ..!??

ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ. ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ…

Read More

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ; ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಆರೋಪಿಗಳ ಬಂಧನ ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್​ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್​ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ…

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್ ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ….

Read More

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್

ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್ ಶಿವಮೊಗ್ಗ: ಮಲೆನಾಡಿನಲ್ಲಿ ಪುಷ್ಯಮಳೆ ಅಬ್ಬರ ಜೋರಾದ ಪರಿಣಾಮ ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿಯಾದ ಹುಲಿಕಲ್ ಘಾಟಿಯಲ್ಲಿ  ರಾಜ್ಯ ಹೆದ್ದಾರಿ 52 ಹಾದು ಹೋಗಲಿದೆ. ಬಾಳೆಬರೆ ಫಾಲ್ಸ್ ಪಕ್ಕದಲ್ಲೇ ಧರೆ ಕುಸಿದಿದೆ. ರಸ್ತೆಯ ಮೇಲೆ ಕುಸಿದ ಮಣ್ಣು ಬಿದ್ದಿದೆ.ಮಣ್ಣಿನ ಜೊತೆ ಕುಸಿದ ಘಾಟಿಯಲ್ಲಿ ಇದ್ದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ …

Read More

ಟ್ರಾನ್ಸ್‌ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ

ಟ್ರಾನ್ಸ್‌ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ ಶಿವಮೊಗ್ಗ , ಜು. 27: ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬೃಹದಾಕಾರದ ಮರವೊಂದು, ವಿದ್ಯುತ್ ಟ್ರಾನ್ಸ್’ಫಾರ್ಮರ್ ಮೇಲೆಯೇ ಉರುಳಿಬಿದ್ದ ಘಟನೆ ಜುಲೈ 27 ರ ಮಧ್ಯಾಹ್ನ ನಡೆದಿದೆ. ಆದಾಯ ತೆರಿಗೆ ಇಲಾಖೆ ಕಚೇರಿ ಪಕ್ಕದ ರಸ್ತೆಯಲ್ಲಿ ಘಟನೆ ನಡೆದಿದೆ. ಗಾಳಿ – ಮಳೆಯಿಂದ ಮರ ಉರುಳಿ ಬಿದ್ದಿದೆ. ಟ್ರಾನ್ಸ್‌ಫಾರ್ಮರ್ ಸೇರಿದಂತೆ ಕೆಲ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟಾವಶಾತ್ ಮರ ಬಿದ್ದ ವೇಳೆ ರಸ್ತೆಯಲ್ಲಿ ಜನ – ವಾಹನ ಸಂಚಾರದ ಪ್ರಮಾಣ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More