Headlines

ವರದಕ್ಷಿಣೆಗಾಗಿ ಪತ್ನಿಯ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ನಾಲ್ವರ ವಿರುದ್ಧ ಪ್ರಕರಣ ದಾಖಲು

ರಿಪ್ಪನ್ ಪೇಟೆ : ವರದಕ್ಷಿಣೆಗಾಗಿ ಬೆತ್ತಲೆ ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಅತ್ತೆ-ಮಾವ ಸೇರಿದಂತೆ ನಾಲ್ವರ ವಿರುದ್ಧ ಮಹಿಳೆಯೊಬ್ಬರು ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶಂಗೇರಿಯ ವೆಲ್ ಕಮ್ ಗೇಟ್‌ನ ಸಂತ್ರಸ್ತೆಯ ಪತಿ ಸಲ್ಮಾನ್, ಅತ್ತೆ ಸಾಹೀರಾ, ಮಾವ ಶೌಕತ್ ಖಾನ್ ಮತ್ತು ನಾದಿನಿ ಸಮೀನಾ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕಿನ ಹುಂಚ ಹೋಬಳಿಯ ಗ್ರಾಮವೊಂದರ ಸಂತ್ರಸ್ತೆಗೆ ಮತ್ತು ಶೃಂಗೇರಿ ವೆಲೆ ಕಮ್ ಗೇಟ್‌ನ ಸಲ್ಮಾನ್ ಜೊತೆ ವಿವಾಹ…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆ ಸಿಬ್ಬಂದಿಯ ಭೀಕರ ಕೊಲೆ|ನಡುರಸ್ತೆಯಲ್ಲಿ ಮೃತದೇಹ ಪತ್ತೆ|Murder

ಶಿವಮೊಗ್ಗ ನಗರದ ಜೈಲ್ ರಸ್ತೆಯ ಇಡ್ಲಿ ಹೌಸ್ ಪಕ್ಕದ ತಿರುವಿನ ವೆಂಕಟೇಶ ನಗರ ತಿರುವಿನ ಆರಂಭದ ಮನೆಯೊಂದರ ಮುಂದೆ ಇಂದು ಮುಂಜಾನೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಆತನ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಮೃತ ವ್ಯಕ್ತಿಯನ್ನು ಗಾಂಧಿನಗರದ ನಿವಾಸಿ ಹಾಗೂ ಶಿವಮೊಗ್ಗ ನಗರದ ಭಾರತ್ ನ್ಯೂರೋ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಎಂ.ವಿ.ಎಂದು ಹೇಳಲಾಗುತ್ತಿದೆ. ಆತನಿಗೆ ಸುಮಾರು 34 ವರ್ಷ ವಯಸ್ಸು ಎನ್ನಲಾಗಿದೆ. ಗಾಂಧಿನಗರದ ನಿವಾಸಿಯಾದ ಆತನಿಗೆ ನಿನ್ನೆ ರಾತ್ರಿ ಎರಡು ಮೂವತ್ತರ ಹೊತ್ತಿಗೆ ಆಸ್ಪತ್ರೆಯಿಂದ ಫೋನ್…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident

ಬೈಕ್ ಹಾಗೂ ಅಂಬುಲೆನ್ಸ್ ನಡುವೆ ಅಪಘಾತ – ಮೂವರು ಯುವಕರು ಸಾವು | Accident ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ ನಡೆದಿದೆ. ಅಂಬುಲೆನ್ಸ್ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತವುಂಟಾಗಿದೆ. ಮೃತರನ್ನು ಪ್ರಸನ್ನ (25), ಕಾರ್ತಿಕ್ (27), ಅಜಯ್ (25) ಎಂದು ಗುರುತಿಸಲಾಗಿದೆ. …

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More