Headlines

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು

ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್‌ಪೆಕ್ಟರ್ ಕೆ.ಟಿ.ಗುರುರಾಜ್…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ.! – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ್ಪಿನ ಕೊರತೆ – ವಿಷ ಸೇವಿಸಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ಸಾವು | ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಉಪ್ಪಿನ ಕೊರತೆಯಿಂದ ವಿಷ ಸೇವಿಸಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಸ್ವಾಮಿನಾಥ್ (55) ಎಂಬಾತನನ್ನು ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದು…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…

Read More

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್

ಪಿಡಿಓ ಹುದ್ದೆ ಮೇಲ್ದರ್ಜೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ – ಗ್ರಾಮ ಪಂಚಾಯತ್ ಗಳ ಸೇವೆಗಳು ಸಂಪೂರ್ಣ ಬಂದ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟ ಕಾಲ ಮುಷ್ಕರಕ್ಕೆ‌ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮ ಪಂಚಾಯತ್ ಗಳ ಸೇವೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಯನ್ನು ಮೇಲ್ದರ್ಜೆಗೆ ಸೇರ್ಪಡಿಸಿಕೊಳ್ಳಬೇಕೆಂದು, ಕಾರ್ಯದರ್ಶಿ ಗ್ರೇಡ್ ಒನ್ ಹುದ್ದೆಯಿಂದ ಪಿಡಿಒ ಆಗಿ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ,…

Read More

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್.

ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಕಾರ್ಯಕ್ರಮ: ಎಂ ಎನ್ ಸುಧಾಕರ್ ಹೊಸನಗರ: ಯಾವುದೇ ಕ್ರೀಡಾ ತರಬೇತಿ ಶಿಬಿರಗಳು ಕ್ರೀಡೆಯನ್ನು ಪ್ರೋತ್ಸಾಹಿಸುವಂತಹ ಒಂದು ಒಳ್ಳೆಯ ಕಾರ್ಯಕ್ರಮವಾಗಿದೆ ಈ ನಿಟ್ಟಿನಲ್ಲಿ ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆ ರಾಷ್ಟ್ರೀಯ ತರಬೇತುದಾರರಾದ ದಿವಂಗತ ಜಾನ್ ವಿಲ್ಸನ್ ಗೋನ್ ಸಾಲ್ವಿಸ್ ಅವರು ಸ್ಮರಣಾರ್ಥ ಈ ಒಂದು ವಾಲಿಬಾಲ್ ತರಬೇತಿ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಮ್ಮಿ ಜಾರ್ಜ್ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಎಂ ಎನ್ ಸುಧಾಕರ್ ತಿಳಿಸಿದರು. ಉಚಿತ ವಾಲಿಬಾಲ್ ತರಬೇತಿ ಶಿಬಿರಕ್ಕೆ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More
Exit mobile version