ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ

ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್‌ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ  ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಶಾಸಕರು…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ

ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ ದೇವಾಲಯದಲ್ಲಿ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ರಿಪ್ಪನ್ ಪೇಟೆ ಯಲ್ಲಿ ರೋಟರಿ ಭವನ ಉದ್ಘಾಟನೆ :

 ರಿಪ್ಪನ್ ಪೇಟೆ : ರೋಟರಿ ಸಂಸ್ಥೆ ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು ರೋಟರಿಯ ಮೂಲ ಉದ್ದೇಶ ಸಮಾಜ ಸೇವೆಯಾಗಿದೆ. ಆರೋಗ್ಯ ಶಿಕ್ಷಣ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ  ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ರೋಟರಿ 31 82ರ ಜಿಲ್ಲಾ ಗವರ್ನರ್ ಎಂ ಜಿ ರಾಮಚಂದ್ರಮೂರ್ತಿ ಹೇಳಿದರು.  ರಿಪ್ಪನ್ ಪೇಟೆ ಯಲ್ಲಿ ನೂತನವಾಗಿ ನಿರ್ಮಾಣವಾದ ರೋಟರಿ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು  ಸಮಾಜಸೇವೆಯ ಮೂಲಕ ಪ್ರತಿಯೊಬ್ಬರೂ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು ಎಂಬುದಕ್ಕೆ ರೋಟರಿ ಸಂಸ್ಥೆಯ ಕಾರ್ಯವೈಖರಿಗಳು ಉತ್ತಮ ಉದಾಹರಣೆಗಳಾಗಿವೆ. ಮಾನವ ಜಗತ್ತಿನಿಂದ ಪೋಲಿಯೋ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More